ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್ನವರು ಒಂದೂವರೆ ವರ್ಷದಿಂದ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಸರ್ಕಾರ ನಿಜವಾಗಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ, 2013 ರಿಂದ 2023 ಮಾರ್ಚ್ ವರೆಗಿನ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡಬೇಕು. ಕೇವಲ ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು. ಯಾರು ಯಾರು ತಪ್ಪಿತಸ್ಥರು ಇದ್ದಾರೆಯೋ ಅವರಿಗೆಲ್ಲಾ ಶಿಕ್ಷೆಯಾಗಬೇಕು ಎಂದರು.
ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ಧದ 40% ಕಮಿಷನ್ ಕುರಿತಾದ ಪ್ರಕರಣಗಳು ಲೋಕಾಯುಕ್ತಾದಲ್ಲಿವೆ. ಅವುಗಳನ್ನು ತನಿಖೆ ನಡೆಸಲಿ ಎಂದು ಹೇಳಿದರು.
ಗುತ್ತಿಗೆದಾರದ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ಧ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇನ್ನೂ ಅದಕ್ಕೆ ಅವರು ದಾಖಲೆಯಾಗಲಿ, ಉತ್ತರವಾಗಲಿ ನೀಡಿಲ್ಲ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…