BREAKING NEWS

ಸುಡಾನ್ ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ಹಕ್ಕಿಪಿಕ್ಕಿ ಜನರ ಸುರಕ್ಷಿತ ವಾಪಸಾತಿಗೆ ಎಲ್ಲಾ ಕ್ರಮ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ನಿರ್ದೇಶಿಸಿದ್ದಾರೆ.
ಸಚಿವರು ಇಂದು, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನು ಸಂಪರ್ಕಿಸಿ, ಮಾತನಾಡಿ, ಸುಡಾನ್ ದೇಶದಲ್ಲಿ ಸಿಕ್ಕಿ ಹಾಕಿಕೊಂಡು, ಆತಂಕಕ್ಕೆ ಒಳಗಾಗಿರುವ ಕರ್ನಾಟಕ ನಿವಾಸಿಗಳ ಕುಟುಂಬದ ಸದಸ್ಯರನ್ನು ಗುರುತಿಸಿ, ಸುರಕ್ಷಿತ ವಾಪಸಾತಿಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವ ಜನರ ಆತಂಕವನ್ನು ಕಡಿಮೆ ಮಾಡಿ, ಅವರ ಸುರಕ್ಷಿತ ವಾಪಸಾತಿಗಾಗಿ, ಕೇಂದ್ರ ವಿದೇಶಾಂಗ ಸಚಿವಾಲಯದ ಜತೆಗೂ ಸತತ ಸಂಪರ್ಕದಲ್ಲಿದ್ದು ಸಮನ್ವಯತೆಯಿಂದ, ಸಂಕಷ್ಟಿತರ ನೆರವಿಗೆ, ಬರಬೇಕೆಂದು, ಸಚಿವರು ನಿರ್ದೇಶಿಸಿದರು.

lokesh

Recent Posts

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

27 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

59 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

1 hour ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

1 hour ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago