ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ನಿರ್ದೇಶಿಸಿದ್ದಾರೆ.
ಸಚಿವರು ಇಂದು, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನು ಸಂಪರ್ಕಿಸಿ, ಮಾತನಾಡಿ, ಸುಡಾನ್ ದೇಶದಲ್ಲಿ ಸಿಕ್ಕಿ ಹಾಕಿಕೊಂಡು, ಆತಂಕಕ್ಕೆ ಒಳಗಾಗಿರುವ ಕರ್ನಾಟಕ ನಿವಾಸಿಗಳ ಕುಟುಂಬದ ಸದಸ್ಯರನ್ನು ಗುರುತಿಸಿ, ಸುರಕ್ಷಿತ ವಾಪಸಾತಿಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವ ಜನರ ಆತಂಕವನ್ನು ಕಡಿಮೆ ಮಾಡಿ, ಅವರ ಸುರಕ್ಷಿತ ವಾಪಸಾತಿಗಾಗಿ, ಕೇಂದ್ರ ವಿದೇಶಾಂಗ ಸಚಿವಾಲಯದ ಜತೆಗೂ ಸತತ ಸಂಪರ್ಕದಲ್ಲಿದ್ದು ಸಮನ್ವಯತೆಯಿಂದ, ಸಂಕಷ್ಟಿತರ ನೆರವಿಗೆ, ಬರಬೇಕೆಂದು, ಸಚಿವರು ನಿರ್ದೇಶಿಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…