BREAKING NEWS

ಸುಡಾನ್ ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ಹಕ್ಕಿಪಿಕ್ಕಿ ಜನರ ಸುರಕ್ಷಿತ ವಾಪಸಾತಿಗೆ ಎಲ್ಲಾ ಕ್ರಮ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ನಿರ್ದೇಶಿಸಿದ್ದಾರೆ.
ಸಚಿವರು ಇಂದು, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನು ಸಂಪರ್ಕಿಸಿ, ಮಾತನಾಡಿ, ಸುಡಾನ್ ದೇಶದಲ್ಲಿ ಸಿಕ್ಕಿ ಹಾಕಿಕೊಂಡು, ಆತಂಕಕ್ಕೆ ಒಳಗಾಗಿರುವ ಕರ್ನಾಟಕ ನಿವಾಸಿಗಳ ಕುಟುಂಬದ ಸದಸ್ಯರನ್ನು ಗುರುತಿಸಿ, ಸುರಕ್ಷಿತ ವಾಪಸಾತಿಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವ ಜನರ ಆತಂಕವನ್ನು ಕಡಿಮೆ ಮಾಡಿ, ಅವರ ಸುರಕ್ಷಿತ ವಾಪಸಾತಿಗಾಗಿ, ಕೇಂದ್ರ ವಿದೇಶಾಂಗ ಸಚಿವಾಲಯದ ಜತೆಗೂ ಸತತ ಸಂಪರ್ಕದಲ್ಲಿದ್ದು ಸಮನ್ವಯತೆಯಿಂದ, ಸಂಕಷ್ಟಿತರ ನೆರವಿಗೆ, ಬರಬೇಕೆಂದು, ಸಚಿವರು ನಿರ್ದೇಶಿಸಿದರು.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago