BREAKING NEWS

ಕೋಲಾರದಲ್ಲಿ ಜೈ ಭಾರತ್’ ಸಮಾವೇಶಕ್ಕೆ ಸಕಲ ಸಿದ್ಧತೆ

ಕೋಲಾರ: ರಾಹುಲ್‌ ಗಾಂಧಿ ಮೇಲಿನ ಶಿಕ್ಷೆ ಹಾಗೂ ಸಂಸತ್‌ ಸದಸ್ಯತ್ವದ ಅನರ್ಹತೆ ಹಿನ್ನೆಲೆಯಲ್ಲಿ ಸಂವಿಧಾನದ ರಕ್ಷಣೆ ವಿಚಾರವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾ ಟಕ್ಕೆ ಮುನ್ನುಡಿ ಬರೆಯಲು ಹಾಗೂ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲು ‘ಜೈ ಭಾರತ್‌’ ಸಮಾವೇಶಕ್ಕೆ ನಗರದಲ್ಲಿ ಕಾಂಗ್ರೆಸ್‌ನಿಂದ ಭರದ ಸಿದ್ಧತೆ ನಡೆದಿದೆ.

ಏ. 10ರಂದು ಬೆಳಿಗ್ಗೆ 11.30ಕ್ಕೆ ಆರಂಭವಾಗಲಿರುವ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಆಡಳಿತದ ಮೂರು ರಾಜ್ಯದ ಮುಖ್ಯಮಂತ್ರಿಗಳು, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳ ಲಿದ್ದಾರೆ. ಸಮಾವೇಶಕ್ಕೂ ಮುನ್ನ ಪ್ರತಿಭಟನಾ ರ‍್ಯಾಲಿ ನಡೆಸಲೂ ಪಕ್ಷ ಯೋಜನೆ ರೂಪಿಸಿದೆ.

ಸಮಾವೇಶಕ್ಕೆ ನಗರ ಹೊರ ವಲಯದ ಟಮಕದಲ್ಲಿ 11 ಎಕರೆ ವಿಶಾಲ ಪ್ರದೇಶದಲ್ಲಿ ಬೃಹತ್‌ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಪಕ್ಕದ ಆರ್‌.ಎಲ್‌. ಜಾಲಪ್ಪ ಆಸ್ಪತ್ರೆಗೆ ಸೇರಿದ ಜಾಗದಲ್ಲಿ ಮೂರು ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಬಳಿ 20 ಎಕರೆಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ‘ಮೋದಿ ಉಪನಾಮ’ ಉವಾಚ ಮಾಡಿದ ಕಾರಣ ರಾಹುಲ್ ಎರಡು ವರ್ಷ ಶಿಕ್ಷೆ ಹಾಗೂ ಸಂಸತ್‌ ಸದಸ್ಯತ್ವದ ಅನರ್ಹತೆಗೆ ಕಾರಣವಾಗಿದ್ದೇ ಕೋಲಾರ. ಹಾಗಾಗಿ, ಇಲ್ಲಿಂದಲೇ ಹೋರಾಟ ಆರಂಭಿಸಿ ಬಿಜೆಪಿಗೆ ಸಂದೇಶ ರವಾನಿಸಲು ಕಾಂಗ್ರೆಸ್‌ ಸಜ್ಜಾಗುತ್ತಿದೆ.

ಕನಿಕರ ಗಿಟ್ಟಿಸಲು ವೇದಿಕೆ: ಬಹುತೇಕ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಂದಲೇ ಚುನಾವಣಾ ಪ್ರಚಾರದ ಕಹಳೆ ಮೊಳಗಿಸಲು ಈ ವೇದಿಕೆಯನ್ನೇ ಬಳಕೆ ಮಾಡಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ರಾಹುಲ್‌ ಮೇಲಿನ ಶಿಕ್ಷೆ ಹಾಗೂ ಅನರ್ಹತೆಯ ಕನಿಕರ ಗಿಟ್ಟಿಸಿಕೊಳ್ಳುವ ವೇದಿಕೆ ಇದಾಗಿದೆ ಎನ್ನಲಾಗುತ್ತಿದೆ.

ಅಭ್ಯರ್ಥಿ ಘೋಷಣೆ?: ಕೋಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರನ್ನೇ ಕಣಕ್ಕಿಳಿಸುವಂತೆ ರಾಹುಲ್ ಮೇಲೆ ಒತ್ತಡ ಹೇರಲು ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಈಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಷಣಕ್ಕೆ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ಸ್ಮರಿಸಬಹುದು. ಎರಡನೇ ಪಟ್ಟಿಯಲ್ಲೂ ಕೋಲಾರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಹೀಗಾಗಿ, ಅಂದೇ ಕೋಲಾರದ ಅಭ್ಯರ್ಥಿಯನ್ನು ಖುದ್ದಾಗಿ ರಾಹುಲ್‌ ಗಾಂಧಿ ಪ್ರಕಟಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

‘ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧನಿದ್ದೇನೆ’ ಎಂದು ಹೇಳಿರುವ ಸಿದ್ದರಾಮಯ್ಯ, ಈಗ ರಾಹುಲ್‌ ಒಪ್ಪಿಗೆಗೆ ಕಾಯುತ್ತಿದ್ದಾರೆ. ಈಗಾಗಲೇ, ವರುಣದಲ್ಲಿ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಸಮಾವೇಶಕ್ಕೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜನರನ್ನು ಸೇರಿಸಲು ಪಕ್ಷದಿಂದ ಸಿದ್ಧತೆ ನಡೆಸಿದೆ.

lokesh

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago