BREAKING NEWS

ಹಿಂದಿನ ಸರ್ಕಾರದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಹಾಸನ:  ಹಿಂದಿನ ಸರ್ಕಾರದಲ್ಲಿ ನಡೆದಿರುವ ವೈದ್ಯಕೀಯ ಕಾಲೇಜು ನಿರ್ಮಾಣ, ನೀರಾವರಿ ಅವ್ಯವಹಾರ, ಬಿಟ್‍ಕಾಯಿನ್, ಕೋವಿಡ್ ಸಂದರ್ಭದ ಖರೀದಿ ಸೇರಿದಂತೆ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಲು ಹಾಸನಕ್ಕೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ ನಡೆದಿವೆ ಎಂಬ ಆರೋಪಗಳಿವೆ. ಕೊರೊನಾ ಸಮಯದಲ್ಲಿ ಅನೇಕ ಸಾಮಾಗ್ರಿ ಖರೀದಿಯಲ್ಲೂ ಅವ್ಯವಹಾರಗಳಾಗಿವೆ. ಅವುಗಳನ್ನು ತನಿಖೆ ನಡೆಸಲಾಗುವುದು.

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಕೇವಲ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಂದಿನ ಆರೋಗ್ಯ ಸಚಿವ ಡಾ.ಸುಧಾಕರ್ ಸುಳ್ಳು ಹೇಳಿದ್ದರು. ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಅವೆಲ್ಲವನ್ನೂ ತನಿಖೆ ನಡೆಸುತ್ತೇವೆ ಎಂದರು.

ನಿರಾವರಿ ಇಲಾಖೆಯಲ್ಲೂ ಅವ್ಯವಹಾರವಾಗಿದೆ ಎಂಬ ಆರೋಪಗಳಿವೆ. ಬಿಟ್ ಕಾಯಿನ್ ಹಗರಣ ನಡೆದಿದೆ. ಪಿಎಸ್‍ಐ ಹಗರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿ ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಶಕ್ತಿ ಜಾರಿಯಾಗಿದೆ. ಮಹಿಳೆಯರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ. ಜುಲೈ ಒಂದರಿಂದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಮನೆ ಯಜಮಾನಿಗೆ ನೀಡುವ ಗೃಹಲಕ್ಷ್ಮೀ ಯೋಜನೆ ಆಗಸ್ಟ್ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಅರ್ಜಿ ಕರೆಯಲಾಗಿದ್ದು, ಸಾಕಷ್ಟು ಅರ್ಜಿಗಳು ಬರುತ್ತಿವೆ ಎಂದರು.

ಅನ್ನಭಾಗ್ಯ ಕಾರ್ಯಕ್ರಮದಲ್ಲಿ ಐದು ಕೆಜಿ ನೀಡಲಾಗುತ್ತಿದೆ. ಅದರ ಜೊತೆಗೆ ಐದು ಕೆಜಿ ಸೇರಿಸಿ ಹತ್ತು ಕೆ.ಜಿ. ನೀಡುವುದಾಗಿ ನಾವು ಭರವಸೆ ನೀಡಿದ್ದೆವು. ಅನ್ನಭಾಗ್ಯ ಯೋಜನೆ ಜಾರಿಗೆ ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಿದೆ. ಆದರೆ ಎಲ್ಲಿಯೂ ಸಿಗುತ್ತಿಲ್ಲ. ಕೇಂದ್ರ ಆಹಾರ ನಿಗಮ ಮೊದಲು ಅಕ್ಕಿ ಕೊಡುತ್ತೇವೆ ಎಂದು ಒಪ್ಪಿಕೊಂಡು ನಂತರ ಕೊಡಕ್ಕಾಗಲ್ಲ ಎಂದು ಪತ್ರ ಬರೆದಿದ್ದಾರೆ. ಕೇಂದ್ರದ ಷಡ್ಯಂತ್ರ ಎಫ್‍ಸಿಐನ ಬಳಿ ಸಾಕಷ್ಟು ದಾಸ್ತಾನು ಇಟ್ಟುಕೊಂಡು ಕೊಡಲ್ಲ ಎನ್ನುತ್ತಿದ್ದಾರೆ. ಕೇಂದ್ರ ಆಹಾರ ನಾಗರೀಕ ಪೂರೈಕೆ ಸಚಿವಾಲಯ ಎಫ್‍ಸಿಐ ನಿಂದ ಪತ್ರ ಬರೆಸಿದೆ. ಬಿಜೆಪಿ ಬಡವರ ಮೇಲೆ ಗದಾ ಪ್ರಹಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಅಕ್ಕಿ ಖರೀದಿಗೆ ಪಂಚಾಬ್, ಚತ್ತಿಸ್‍ಗಡ, ತೆಲಂಗಾಣ, ಆಂಧ್ರ ಪ್ರದೇಶ ಸರ್ಕಾರದಲ್ಲಿ ಪ್ರಯತ್ನ ಮಾಡಿದ್ದೇವೆ. ಅಕ್ಕಿ ಸಿಕ್ಕ ತಕ್ಷಣವೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಅಕ್ಕಿ ಖರೀದಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿಯವರು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಒಂದಾದರೂ ಜಾರಿ ಮಾಡಿದರಾ. ರಾಜಕೀಯ ಗಿಮಿಕ್ ಎಂದು ಆರೋಪಿಸಿ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದಕ್ಕೆ ಜನರು ಕಿವಿಗೊಡಬೇಡಿ. ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.

ಯುವ ನಿಧಿ ಕಾರ್ಯಕ್ರಮ 2022-23ರಲ್ಲಿ ಉತ್ತೀರ್ಣವಾಗಿರುವ ಪದವೀಧರರು ಹಾಗೂ ಡಿಪ್ಲೋಮೋ ಪದವೀಧರರಿಗೆ ಆರು ತಿಂಗಳವರೆಗೂ ಕೆಲಸ ಸಿಗದಿದ್ದರೆ 24 ತಿಂಗಳು ತಿಂಗಳಿಗೆ ಮೂರು ಸಾವಿರ ಮತ್ತು ಒಂದು ಸಾವಿರ ರೂಪಾಯಿ ಪಂಚಖಾತ್ರಿಗಳ ಜಾರಿಗೆ ವರ್ಷಕ್ಕೆ 59 ಸಾವಿರ ಕೋಟಿ ಬೇಕು. ಈ ವರ್ಷ ಭಾರ ಜಾಸ್ತಿ ಇದೆ. ಯಾರು ಏನೇ ಹೇಳಲಿ.  ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಹೇಳಿದರು.

andolanait

Recent Posts

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

35 mins ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

2 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

4 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

4 hours ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

6 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

7 hours ago