BREAKING NEWS

ಅಲಹಾಬಾದ್ ಹೈಕೋರ್ಟ್ ತೀರ್ಪು: ಸುಪ್ರೀಂಕೋರ್ಟ್ ಮಧ್ಯಪ್ರವೇಶ

ನವದೆಹಲಿ: ಅತ್ಯಾಚಾರ ಸಂತ್ರಸ್ತೆ ಮಾಂಗ್ಲಿಕ್ ಎನ್ನುವುದನ್ನು ಪತ್ತೆ ಹಚ್ಚಲು ಆಕೆಯ ಜಾತಕವನ್ನು ಪರೀಕ್ಷಿಸುವಂತೆ ಅಲಹಾಬಾದ್ ಹೈಕೋರ್ಟ್‍ನ ಆದೇಶದ ಮೇರೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ವಿದೇಶದಲ್ಲಿದ್ದರೂ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ಧಾರೆ.

ಮುಖ್ಯನ್ಯಾಯಮೂರ್ತಿಗಳ ಸೂಚನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಪಂಕಜ್ ಮಿಥಾಲ್ ವಿಶೇಷ ಸಭೆ ನಡೆಸಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತ ಮಹಿಳೆ ಮಾಂಗ್ಲಿಕ್ ಆಗಿರುವುದರಿಂದ ಆಕೆಯನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ಆರೋಪಿ ಹೇಳಿದ ಬಳಿಕ ಆಕೆಯ ಜಾತಕ ಪರಿಶೀಲಿಸುವಂತೆ ಅಲಹಾಬಾದ್ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ಥೆಗೆ ನ್ಯಾಯ ಒದಗಿಸಲು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂತಿ ಚಂದ್ರಚೂಡ್ ಮಧ್ಯ ಪ್ರವೇಶಿಸಿದ್ಧಾರೆ.

ಸುಪ್ರೀಂ ಕೋರ್ಟ್‍ಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಯಾವುದೇ ವಿಚಾರಣೆ ನಡೆಯುವುದಿಲ್ಲ. ಅಲಹಾಬಾದ್ ಹೈಕೋರ್ಟ್ ಆದೇಶದ ಬಗ್ಗೆ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮಾಹಿತಿ ತಿಳಿದುಕೊಂಡು ಸಮಸ್ಯೆಯನ್ನು ಗಮನಿಸಲು ನ್ಯಾಯಪೀಠಕ್ಕೆ ಸೂಚಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ಮಂಗಳ ಗ್ರಹದ ಪ್ರಭಾವದಿಂದ ಜನಿಸಿದ ವ್ಯಕ್ತಿಗೆ “ಮಂಗಳ ದೋಷ” ಇದೆ ಎಂದು ನಂಬುತ್ತಾರೆ. ಮಾಂಗಲ್ಯ ಮತ್ತು ಮಾಂಗಲ್ಯೇತರರ ನಡುವಿನ ವಿವಾಹ ಅಶುಭ ಎಂಬ ಮೂಢನಂಬಿಕೆ ಇದೆ ಎಂದು ನ್ಯಾಯಪೀಠಕ್ಕೆ ವಕೀಲರು ತಂದಿದ್ದರು.

ಮದುವೆಯ ನೆಪದಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್‌ ಅಲಹಾಬಾದ್ ಹೈಕೋರ್ಟ್‍ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಮಹಿಳೆ ಮಾಂಗ್ಲೀಕ್ ಆಗಿರುವುದರಿಂದ ಮದುವೆಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮೇ 23 ರಂದು, ಹೈಕೋರ್ಟ್ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಮಹಿಳೆಯ ಜಾತಕವನ್ನು ಅಧ್ಯಯನ ಮಾಡಿ ಅವರ ಹಕ್ಕು ನಿಜವೇ ಎಂದು ಪರಿಶೀಲಿಸುವಂತೆ ಸೂಚಿಸಿತ್ತು. ಅದಕ್ಕೆ ಈಗ ಸುಪ್ರೀಂಕೋರ್ಟ್ ತಡೆ ನೀಡಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago