BREAKING NEWS

ಅಲಹಾಬಾದ್ ಹೈಕೋರ್ಟ್ ತೀರ್ಪು: ಸುಪ್ರೀಂಕೋರ್ಟ್ ಮಧ್ಯಪ್ರವೇಶ

ನವದೆಹಲಿ: ಅತ್ಯಾಚಾರ ಸಂತ್ರಸ್ತೆ ಮಾಂಗ್ಲಿಕ್ ಎನ್ನುವುದನ್ನು ಪತ್ತೆ ಹಚ್ಚಲು ಆಕೆಯ ಜಾತಕವನ್ನು ಪರೀಕ್ಷಿಸುವಂತೆ ಅಲಹಾಬಾದ್ ಹೈಕೋರ್ಟ್‍ನ ಆದೇಶದ ಮೇರೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ವಿದೇಶದಲ್ಲಿದ್ದರೂ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ಧಾರೆ.

ಮುಖ್ಯನ್ಯಾಯಮೂರ್ತಿಗಳ ಸೂಚನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಪಂಕಜ್ ಮಿಥಾಲ್ ವಿಶೇಷ ಸಭೆ ನಡೆಸಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತ ಮಹಿಳೆ ಮಾಂಗ್ಲಿಕ್ ಆಗಿರುವುದರಿಂದ ಆಕೆಯನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ಆರೋಪಿ ಹೇಳಿದ ಬಳಿಕ ಆಕೆಯ ಜಾತಕ ಪರಿಶೀಲಿಸುವಂತೆ ಅಲಹಾಬಾದ್ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ಥೆಗೆ ನ್ಯಾಯ ಒದಗಿಸಲು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂತಿ ಚಂದ್ರಚೂಡ್ ಮಧ್ಯ ಪ್ರವೇಶಿಸಿದ್ಧಾರೆ.

ಸುಪ್ರೀಂ ಕೋರ್ಟ್‍ಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಯಾವುದೇ ವಿಚಾರಣೆ ನಡೆಯುವುದಿಲ್ಲ. ಅಲಹಾಬಾದ್ ಹೈಕೋರ್ಟ್ ಆದೇಶದ ಬಗ್ಗೆ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮಾಹಿತಿ ತಿಳಿದುಕೊಂಡು ಸಮಸ್ಯೆಯನ್ನು ಗಮನಿಸಲು ನ್ಯಾಯಪೀಠಕ್ಕೆ ಸೂಚಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ಮಂಗಳ ಗ್ರಹದ ಪ್ರಭಾವದಿಂದ ಜನಿಸಿದ ವ್ಯಕ್ತಿಗೆ “ಮಂಗಳ ದೋಷ” ಇದೆ ಎಂದು ನಂಬುತ್ತಾರೆ. ಮಾಂಗಲ್ಯ ಮತ್ತು ಮಾಂಗಲ್ಯೇತರರ ನಡುವಿನ ವಿವಾಹ ಅಶುಭ ಎಂಬ ಮೂಢನಂಬಿಕೆ ಇದೆ ಎಂದು ನ್ಯಾಯಪೀಠಕ್ಕೆ ವಕೀಲರು ತಂದಿದ್ದರು.

ಮದುವೆಯ ನೆಪದಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್‌ ಅಲಹಾಬಾದ್ ಹೈಕೋರ್ಟ್‍ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಮಹಿಳೆ ಮಾಂಗ್ಲೀಕ್ ಆಗಿರುವುದರಿಂದ ಮದುವೆಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮೇ 23 ರಂದು, ಹೈಕೋರ್ಟ್ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಮಹಿಳೆಯ ಜಾತಕವನ್ನು ಅಧ್ಯಯನ ಮಾಡಿ ಅವರ ಹಕ್ಕು ನಿಜವೇ ಎಂದು ಪರಿಶೀಲಿಸುವಂತೆ ಸೂಚಿಸಿತ್ತು. ಅದಕ್ಕೆ ಈಗ ಸುಪ್ರೀಂಕೋರ್ಟ್ ತಡೆ ನೀಡಿದೆ.

andolanait

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

5 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago