BREAKING NEWS

ಅಲಹಾಬಾದ್ ಹೈಕೋರ್ಟ್ ತೀರ್ಪು: ಸುಪ್ರೀಂಕೋರ್ಟ್ ಮಧ್ಯಪ್ರವೇಶ

ನವದೆಹಲಿ: ಅತ್ಯಾಚಾರ ಸಂತ್ರಸ್ತೆ ಮಾಂಗ್ಲಿಕ್ ಎನ್ನುವುದನ್ನು ಪತ್ತೆ ಹಚ್ಚಲು ಆಕೆಯ ಜಾತಕವನ್ನು ಪರೀಕ್ಷಿಸುವಂತೆ ಅಲಹಾಬಾದ್ ಹೈಕೋರ್ಟ್‍ನ ಆದೇಶದ ಮೇರೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ವಿದೇಶದಲ್ಲಿದ್ದರೂ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ಧಾರೆ.

ಮುಖ್ಯನ್ಯಾಯಮೂರ್ತಿಗಳ ಸೂಚನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಪಂಕಜ್ ಮಿಥಾಲ್ ವಿಶೇಷ ಸಭೆ ನಡೆಸಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತ ಮಹಿಳೆ ಮಾಂಗ್ಲಿಕ್ ಆಗಿರುವುದರಿಂದ ಆಕೆಯನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ಆರೋಪಿ ಹೇಳಿದ ಬಳಿಕ ಆಕೆಯ ಜಾತಕ ಪರಿಶೀಲಿಸುವಂತೆ ಅಲಹಾಬಾದ್ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ಥೆಗೆ ನ್ಯಾಯ ಒದಗಿಸಲು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂತಿ ಚಂದ್ರಚೂಡ್ ಮಧ್ಯ ಪ್ರವೇಶಿಸಿದ್ಧಾರೆ.

ಸುಪ್ರೀಂ ಕೋರ್ಟ್‍ಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಯಾವುದೇ ವಿಚಾರಣೆ ನಡೆಯುವುದಿಲ್ಲ. ಅಲಹಾಬಾದ್ ಹೈಕೋರ್ಟ್ ಆದೇಶದ ಬಗ್ಗೆ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮಾಹಿತಿ ತಿಳಿದುಕೊಂಡು ಸಮಸ್ಯೆಯನ್ನು ಗಮನಿಸಲು ನ್ಯಾಯಪೀಠಕ್ಕೆ ಸೂಚಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ಮಂಗಳ ಗ್ರಹದ ಪ್ರಭಾವದಿಂದ ಜನಿಸಿದ ವ್ಯಕ್ತಿಗೆ “ಮಂಗಳ ದೋಷ” ಇದೆ ಎಂದು ನಂಬುತ್ತಾರೆ. ಮಾಂಗಲ್ಯ ಮತ್ತು ಮಾಂಗಲ್ಯೇತರರ ನಡುವಿನ ವಿವಾಹ ಅಶುಭ ಎಂಬ ಮೂಢನಂಬಿಕೆ ಇದೆ ಎಂದು ನ್ಯಾಯಪೀಠಕ್ಕೆ ವಕೀಲರು ತಂದಿದ್ದರು.

ಮದುವೆಯ ನೆಪದಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್‌ ಅಲಹಾಬಾದ್ ಹೈಕೋರ್ಟ್‍ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಮಹಿಳೆ ಮಾಂಗ್ಲೀಕ್ ಆಗಿರುವುದರಿಂದ ಮದುವೆಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮೇ 23 ರಂದು, ಹೈಕೋರ್ಟ್ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಮಹಿಳೆಯ ಜಾತಕವನ್ನು ಅಧ್ಯಯನ ಮಾಡಿ ಅವರ ಹಕ್ಕು ನಿಜವೇ ಎಂದು ಪರಿಶೀಲಿಸುವಂತೆ ಸೂಚಿಸಿತ್ತು. ಅದಕ್ಕೆ ಈಗ ಸುಪ್ರೀಂಕೋರ್ಟ್ ತಡೆ ನೀಡಿದೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

11 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

22 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

22 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

22 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

22 hours ago