ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.
ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್? ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.
ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…