BREAKING NEWS

ವಿಧಾನಸಭಾ ಚುನಾವಣಾ ಅಕ್ರಮ ಆರೋಪ: ಎಚ್‌.ಡಿ ರೇವಣ್ಣಗೆ ಸಮನ್ಸ್‌ ಜಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್? ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

andolanait

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

39 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago