BREAKING NEWS

ವಿಧಾನಸಭಾ ಚುನಾವಣಾ ಅಕ್ರಮ ಆರೋಪ: ಎಚ್‌.ಡಿ ರೇವಣ್ಣಗೆ ಸಮನ್ಸ್‌ ಜಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್? ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

andolanait

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago