ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.
ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. ದೂರು ಆಧರಿಸಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಧಾಕರ್ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪೆನಿಯ ಪಾಲುದಾರರಾದ ಸಚಿವ ಸುಧಾಕರ್ ಅವರು ಯಲಹಂಕ ಗ್ರಾಮದ ಸರ್ವೆ ನಂ. 108/1ರ ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ. ಈ ಜಮೀನಿನ ವಿವಾದ ಕೋರ್ಟ್ನಲ್ಲಿ ಬಾಕಿಯಿದ್ದರೂ, ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಕುಟುಂಬದ ಮಹಿಳೆಯರನ್ನು ಹೊರಹಾಕಿ ಜೆಸಿಬಿ ಯಂತ್ರ ಬಳಸಿ ಮನೆಯನ್ನು ಕೆಡವಲಾಗಿದೆ ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಆಸ್ತಿಗೆ 11 ಮಂದಿ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಸುಧಾಕರ್ ಅವರ ಪುತ್ರ ಸುಹಾಸ್ ಪೊಲೀಸ್ ದೂರು ನೀಡಿದ ಒಂದು ದಿನದ ನಂತರ ಈ ಪ್ರಕರಣ ನಡೆದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…