BREAKING NEWS

ಜಾತಿ ನಿಂದನೆ ಆರೋಪ : ಸಚಿವ ಡಿ. ಸುಧಾಕರ್‌ ವಿರುದ್ಧ ದೂರು ದಾಖಲು

ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.

ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. ದೂರು ಆಧರಿಸಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಧಾಕರ್ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪೆನಿಯ ಪಾಲುದಾರರಾದ ಸಚಿವ ಸುಧಾಕರ್ ಅವರು ಯಲಹಂಕ ಗ್ರಾಮದ ಸರ್ವೆ ನಂ. 108/1ರ ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ. ಈ ಜಮೀನಿನ ವಿವಾದ ಕೋರ್ಟ್‌ನಲ್ಲಿ ಬಾಕಿಯಿದ್ದರೂ, ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಕುಟುಂಬದ ಮಹಿಳೆಯರನ್ನು ಹೊರಹಾಕಿ ಜೆಸಿಬಿ ಯಂತ್ರ ಬಳಸಿ ಮನೆಯನ್ನು ಕೆಡವಲಾಗಿದೆ ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಆಸ್ತಿಗೆ 11 ಮಂದಿ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಸುಧಾಕರ್ ಅವರ ಪುತ್ರ ಸುಹಾಸ್ ಪೊಲೀಸ್ ದೂರು ನೀಡಿದ ಒಂದು ದಿನದ ನಂತರ ಈ ಪ್ರಕರಣ ನಡೆದಿದೆ.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago