BREAKING NEWS

ಮಲ್ಲಿಕಾರ್ಜುನ ಖರ್ಗೆ ಕುಟುಂಬ ಹತ್ಯೆಗೆ ಸಂಚು ಆರೋಪ : ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್​ಐಆರ್ ದಾಖಲು

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿರುವ ಬಿಜೆಪಿ ನಾಯಕರು, ಈ ಬಾರಿ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಚಿತ್ತಾಪುರ ಕ್ಷೇತ್ರದಲ್ಲಿ ಸೋಲಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಆದ್ರೆ, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎನ್ನಲಾಗಿರುವ ಅದೊಂದು ಆಡಿಯೋ ಇದೀಗ ಸಂಚಲನ ಸೃಷ್ಟಿಮಾಡಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಸಂಚು ಆರೋಪಿಸಿ, ಚುನಾವಣಾ ಸಿಬ್ಬಂದಿ ಕರ್ಣ ಕುಮಾರ್ ದೂರಿನ ಮೇರೆಗೆ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ
ಎಫ್​ಐಆರ್ ದಾಖಲಾಗಿದೆ. ​ಐಪಿಸಿ ಸೆಕ್ಷನ್ 504, 506ರಡಿ ದೂರು ದಾಖಲಿಸಿಕೊಂಡಿದ್ದಾರೆ.

ಕಳೆದ ಕೆಲ ತಿಂಗಳಿಂದ ಖರ್ಗೆ ಕುಟುಂಬದ ಬಗ್ಗೆ ಬಹಿರಂಗವಾಗಿ ಅನೇಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಿದ್ದು, ಜಿಲ್ಲೆಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ದ ಅನೇಕ ಆರೋಪಗಳನ್ನು ಮಾಡುವುದರ ಜೊತೆಗೆ ಅವರ ವಿರುದ್ದ ತೊಡೆ ತಟ್ಟುವ ಕೆಲಸವನ್ನು ಮಾಡಿದ್ದರು. ಇದೇ ಕಾರಣದಿಂದಲೇ ಅನೇಕ ಆಕಾಂಕ್ಷಿಗಳಿದ್ದರು ಕೂಡ ಅವರೆಲ್ಲರನ್ನು ಬಿಟ್ಟು ಬಿಜೆಪಿ ಹೈಕಮಾಂಡ್, ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್​ನ್ನು ಮಣಿಕಂಠ ರಾಠೋಡ್​ಗೆ ನೀಡಿತ್ತು. ಈ ಹಿಂದೆ ನಾನು ಪ್ರಿಯಾಂಕ್ ಖರ್ಗೆರನ್ನು ಶೂಟ್ ಮಾಡಲು ಕೂಡಾ ಸಿದ್ದ ಅಂತ ಹೇಳಿದ್ದ ಮಣಿಕಂಠ ರಾಠೋಡ್ ವಿಡಿಯೋ ಎಲ್ಲಡೆ ವೈರಲ್ ಆಗಿತ್ತು. ಆದ್ರೆ, ಇದೀಗ ಖರ್ಗೆ ಕುಟುಂಬವನ್ನು ಸಾಪ್ ಮಾಡಿಬಿಡುತ್ತಿದ್ದೆ ಎಂದು ಹೇಳಿರುವ ಆಡಿಯೋವೊಂದು ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ.

ಆಡಿಯೋದಲ್ಲೇನಿದೆ ? : ರವಿ ಎನ್ನುವ ವ್ಯಕ್ತಿಯ ಜೊತೆ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ಆಡಿಯೋವನ್ನು ಕಾಂಗ್ರೆಸ್ ನಾಯಕರು ನಿನ್ನೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರವಿ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ಆಡಿಯೋದಲ್ಲಿ, ‘ನನ್ನ ಬಳಿ ಖರ್ಗೆ ಅವರ ನಂಬರ್ ಇಲ್ಲ, ನಂಬರ್ ಇದ್ದಿದ್ದರೆ ಅವರನ್ನು ಮತ್ತು ಅವರ ಹೆಂಡತಿ ಮಕ್ಕಳನ್ನು ಸಾಪ್ ಮಾಡ್ತೇನೆ, ಅದಕ್ಕೆ ಅವರ ನಂಬರ್ ಇಲ್ಲ ಎಂದು ಹೇಳುತ್ತಾರೆ. ಇನ್ನು ಮಣಿಕಂಠ ರಾಠೋಡ್ ಮೇಲೆ ನಲವತ್ತಕ್ಕೂ ಹೆಚ್ಚು ಕೇಸ್​‘ಗಳಿವೆ. ರೌಡಿಶೀಟರ್​ ಪಟ್ಟಿಯಲ್ಲಿರುವ ಮಣಿಕಂಠ ರಾಠೋಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದವರ ಹತ್ಯೆಗೆ ಸಂಚು ರೂಪಸಿದ್ದಾರೆ ಎಂದು ಆರೋಪಿಸಿದ್ದಾರೆ.

lokesh

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago