BREAKING NEWS

ಲೋಕಸಭೆಯಲ್ಲಿ ಸುಳ್ಳು ಮಾಹಿತಿ ಆರೋಪ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ ಎಂದು ndtv.com ವರದಿ ಮಾಡಿದೆ.

ಈ ನೋಟಿಸ್ ಅನ್ನು ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ಸಚೇತಕ ಮಣಿಕಂ ಟ್ಯಾಗೋರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಸಲ್ಲಿಸಿದ್ದಾರೆ. “ನಿನ್ನೆ (ಬುಧವಾರ) ಕಲಾವತಿ ಕತೆಯನ್ನು ತಪ್ಪಾಗಿ ಹೇಳಿ, ಲೋಕಸಭೆಯ ದಾರಿ ತಪ್ಪಿಸಿರುವುದಕ್ಕೆ ನಾನು ಅಮಿತ್ ಶಾ ವಿರುದ್ಧ ಗೌರವಾನ್ವಿತ ಲೋಕಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ” ಎಂದು ಟ್ಯಾಗೋರ್ ತಮ್ಮ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಇದರೊಂದಿಗೆ ಅವರು ನೋಟಿಸ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ಉಂಟಾಗಿದ್ದ ಕೃಷಿ ಬಿಕ್ಕಟ್ಟಿನ ಕಾರಣಕ್ಕೆ 2008ರಲ್ಲಿ ಕಲಾವತಿ ಬಂಡೂರ್ಕರ್ ಅವರ ಪತಿ ಆತ್ಮಹತ್ಯೆಗೆ ಶರಣಾದ ನಂತರ, ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿದ್ದರು. ಅವಿಶ‍್ವಾಸ ನಿರ್ಣಯದ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ್ದ ಅಮಿತ್ ಶಾ, ಹೇಗೆ ರಾಹುಲ್ ಗಾಂಧಿಯವರ ರಾಜಕೀಯ ಜೀವನವನ್ನು ಮೇಲೆತ್ತಲು 13 ವಿಫಲ ಪ್ರಯತ್ನಗಳನ್ನು ನಡೆಸಲಾಯಿತು ಹಾಗೂ ರಾಹುಲ್ ಗಾಂಧಿ ಹೇಗೆ ಬಡ ಮಹಿಳೆ ಕಲಾವತಿಯ ಕತೆಯನ್ನು ನಿರೂಪಿಸಿದರು ಎಂಬ ಸಂಗತಿಯನ್ನು ಸ್ಮರಿಸಿದ್ದರು.

ಆ ರೈತ ಮಹಿಳೆಗೆ ಮನೆ ದೊರೆಯುವಂತೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳು ದೊರೆಯುವಂತೆ ಖಾತ್ರಿಗೊಳಿಸಿದ್ದು ಮೋದಿ ಸರ್ಕಾರ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಆದರೆ, ಮೋದಿ ಸರ್ಕಾರ ಕಲಾವತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ರೈತ ಮಹಿಳೆಯ ವಿಡಿಯೊವನ್ನು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಆ ವಿಡಿಯೊದಲ್ಲಿ ತಾನು ಬಡತನದಿಂದ ಹೊರ ಬರಲು ರಾಹುಲ್ ಗಾಂಧಿ ನೆರವು ನೀಡಿದರು ಎಂದು ರೈತ ಮಹಿಳೆ ಕಲಾವತಿ ಹೇಳಿಕೊಂಡಿದ್ದಾರೆ. ಟ್ಯಾಗೋರ್ ಅವರು ತಮ್ಮ ನೋಟಿಸ್ ನಲ್ಲಿ, ಅಮಿತ್ ಶಾ ಸದನವನ್ನುದ್ದೇಶಿಸಿ ಮಾತನಾಡುವಾಗ ಕರಾರುವಾಕ್ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ಎತ್ತಿ ಹಿಡಿಯದೆ ಸಂಸದೀಯ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

1 hour ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago