ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ ಎಂದು ndtv.com ವರದಿ ಮಾಡಿದೆ.
ಈ ನೋಟಿಸ್ ಅನ್ನು ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ಸಚೇತಕ ಮಣಿಕಂ ಟ್ಯಾಗೋರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಸಲ್ಲಿಸಿದ್ದಾರೆ. “ನಿನ್ನೆ (ಬುಧವಾರ) ಕಲಾವತಿ ಕತೆಯನ್ನು ತಪ್ಪಾಗಿ ಹೇಳಿ, ಲೋಕಸಭೆಯ ದಾರಿ ತಪ್ಪಿಸಿರುವುದಕ್ಕೆ ನಾನು ಅಮಿತ್ ಶಾ ವಿರುದ್ಧ ಗೌರವಾನ್ವಿತ ಲೋಕಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ” ಎಂದು ಟ್ಯಾಗೋರ್ ತಮ್ಮ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ಇದರೊಂದಿಗೆ ಅವರು ನೋಟಿಸ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ಉಂಟಾಗಿದ್ದ ಕೃಷಿ ಬಿಕ್ಕಟ್ಟಿನ ಕಾರಣಕ್ಕೆ 2008ರಲ್ಲಿ ಕಲಾವತಿ ಬಂಡೂರ್ಕರ್ ಅವರ ಪತಿ ಆತ್ಮಹತ್ಯೆಗೆ ಶರಣಾದ ನಂತರ, ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿದ್ದರು. ಅವಿಶ್ವಾಸ ನಿರ್ಣಯದ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ್ದ ಅಮಿತ್ ಶಾ, ಹೇಗೆ ರಾಹುಲ್ ಗಾಂಧಿಯವರ ರಾಜಕೀಯ ಜೀವನವನ್ನು ಮೇಲೆತ್ತಲು 13 ವಿಫಲ ಪ್ರಯತ್ನಗಳನ್ನು ನಡೆಸಲಾಯಿತು ಹಾಗೂ ರಾಹುಲ್ ಗಾಂಧಿ ಹೇಗೆ ಬಡ ಮಹಿಳೆ ಕಲಾವತಿಯ ಕತೆಯನ್ನು ನಿರೂಪಿಸಿದರು ಎಂಬ ಸಂಗತಿಯನ್ನು ಸ್ಮರಿಸಿದ್ದರು.
ಆ ರೈತ ಮಹಿಳೆಗೆ ಮನೆ ದೊರೆಯುವಂತೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳು ದೊರೆಯುವಂತೆ ಖಾತ್ರಿಗೊಳಿಸಿದ್ದು ಮೋದಿ ಸರ್ಕಾರ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಆದರೆ, ಮೋದಿ ಸರ್ಕಾರ ಕಲಾವತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ರೈತ ಮಹಿಳೆಯ ವಿಡಿಯೊವನ್ನು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಆ ವಿಡಿಯೊದಲ್ಲಿ ತಾನು ಬಡತನದಿಂದ ಹೊರ ಬರಲು ರಾಹುಲ್ ಗಾಂಧಿ ನೆರವು ನೀಡಿದರು ಎಂದು ರೈತ ಮಹಿಳೆ ಕಲಾವತಿ ಹೇಳಿಕೊಂಡಿದ್ದಾರೆ. ಟ್ಯಾಗೋರ್ ಅವರು ತಮ್ಮ ನೋಟಿಸ್ ನಲ್ಲಿ, ಅಮಿತ್ ಶಾ ಸದನವನ್ನುದ್ದೇಶಿಸಿ ಮಾತನಾಡುವಾಗ ಕರಾರುವಾಕ್ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ಎತ್ತಿ ಹಿಡಿಯದೆ ಸಂಸದೀಯ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…