BREAKING NEWS

ಲೋಕಸಭೆಯಲ್ಲಿ ಸುಳ್ಳು ಮಾಹಿತಿ ಆರೋಪ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ ಎಂದು ndtv.com ವರದಿ ಮಾಡಿದೆ.

ಈ ನೋಟಿಸ್ ಅನ್ನು ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ಸಚೇತಕ ಮಣಿಕಂ ಟ್ಯಾಗೋರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಸಲ್ಲಿಸಿದ್ದಾರೆ. “ನಿನ್ನೆ (ಬುಧವಾರ) ಕಲಾವತಿ ಕತೆಯನ್ನು ತಪ್ಪಾಗಿ ಹೇಳಿ, ಲೋಕಸಭೆಯ ದಾರಿ ತಪ್ಪಿಸಿರುವುದಕ್ಕೆ ನಾನು ಅಮಿತ್ ಶಾ ವಿರುದ್ಧ ಗೌರವಾನ್ವಿತ ಲೋಕಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ” ಎಂದು ಟ್ಯಾಗೋರ್ ತಮ್ಮ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಇದರೊಂದಿಗೆ ಅವರು ನೋಟಿಸ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ಉಂಟಾಗಿದ್ದ ಕೃಷಿ ಬಿಕ್ಕಟ್ಟಿನ ಕಾರಣಕ್ಕೆ 2008ರಲ್ಲಿ ಕಲಾವತಿ ಬಂಡೂರ್ಕರ್ ಅವರ ಪತಿ ಆತ್ಮಹತ್ಯೆಗೆ ಶರಣಾದ ನಂತರ, ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿದ್ದರು. ಅವಿಶ‍್ವಾಸ ನಿರ್ಣಯದ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ್ದ ಅಮಿತ್ ಶಾ, ಹೇಗೆ ರಾಹುಲ್ ಗಾಂಧಿಯವರ ರಾಜಕೀಯ ಜೀವನವನ್ನು ಮೇಲೆತ್ತಲು 13 ವಿಫಲ ಪ್ರಯತ್ನಗಳನ್ನು ನಡೆಸಲಾಯಿತು ಹಾಗೂ ರಾಹುಲ್ ಗಾಂಧಿ ಹೇಗೆ ಬಡ ಮಹಿಳೆ ಕಲಾವತಿಯ ಕತೆಯನ್ನು ನಿರೂಪಿಸಿದರು ಎಂಬ ಸಂಗತಿಯನ್ನು ಸ್ಮರಿಸಿದ್ದರು.

ಆ ರೈತ ಮಹಿಳೆಗೆ ಮನೆ ದೊರೆಯುವಂತೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳು ದೊರೆಯುವಂತೆ ಖಾತ್ರಿಗೊಳಿಸಿದ್ದು ಮೋದಿ ಸರ್ಕಾರ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಆದರೆ, ಮೋದಿ ಸರ್ಕಾರ ಕಲಾವತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ರೈತ ಮಹಿಳೆಯ ವಿಡಿಯೊವನ್ನು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಆ ವಿಡಿಯೊದಲ್ಲಿ ತಾನು ಬಡತನದಿಂದ ಹೊರ ಬರಲು ರಾಹುಲ್ ಗಾಂಧಿ ನೆರವು ನೀಡಿದರು ಎಂದು ರೈತ ಮಹಿಳೆ ಕಲಾವತಿ ಹೇಳಿಕೊಂಡಿದ್ದಾರೆ. ಟ್ಯಾಗೋರ್ ಅವರು ತಮ್ಮ ನೋಟಿಸ್ ನಲ್ಲಿ, ಅಮಿತ್ ಶಾ ಸದನವನ್ನುದ್ದೇಶಿಸಿ ಮಾತನಾಡುವಾಗ ಕರಾರುವಾಕ್ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ಎತ್ತಿ ಹಿಡಿಯದೆ ಸಂಸದೀಯ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

46 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago