ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಗೋಮಾಳ ಸೇರಿ ೧೨ ಎಕರೆಯಲ್ಲಿ ಬೆಳೆದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ೧೨೬ ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ವಿಕ್ರಮ್ ಸಿಂಹ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದ ಅರಣ್ಯ ಭವನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಸುಮಾರು ೨೦ ರಿಂದ ೩೦ ಲೋಡ್ ಮರಗಳನ್ನು ಕಡಿದು ಮಾರಾಟ ಮಾಡಿರುವ ಹಿನ್ನಲೆ ಬಂಧಿಸಲಾಗಿದೆ. ಜಯಮ್ಮರ ೧೬.ಪಿ೨ ರಲ್ಲಿ ೩ ಎಕರೆ ೧೦ ಗುಂಟೆ ಜಾಗದಲ್ಲಿ ಶುಂಠಿ ಬೆಳೆಯಲು ಒಪ್ಪಂದಕ್ಕೆ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಸಹಿ ಹಾಕಿದ್ದರು. ಅಲ್ಲಿ ಹೊನ್ನೆ, ನಂದಿ, ಗರಿ ಹೆಬ್ಬೇವು, ಹೆಬ್ಬೆಲಸು, ಮಾವು ಮತ್ತು ಹಲಸು ಮರಗಳು ಸೇರಿದಂತೆ ಹಲವು ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…