BREAKING NEWS

ಹಿಂದಿಯೇತರರಿಗೆ ಮಾತೃಭಾಷೆಯಲ್ಲಿ CRPF ಪರೀಕ್ಷೆ ಬರೆಯಲು ಅವಕಾಶ ನೀಡಿ: ಸ್ಟಾಲಿನ್‌

ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಾಗಿ ಭಾನುವಾರ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ ಎಂದು ತಮಿಳುನಾಡು ಸರ್ಕಾರ ಪ್ರಕಟಿಸಿದೆ.

ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಡೆಯುತ್ತಿದ್ದು, ಇದರಿಂದ ತಮಿಳು ನಾಡಿನಂಥ ರಾಜ್ಯಗಳಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಹಿನ್ನೆಡೆಯಾಗುತ್ತಿದೆ. ಆಯಾಯ ಅಭ್ಯರ್ಥಿಗಳ ರಾಜ್ಯದ ಪ್ರಧಾನ ಭಾಷೆಯ ಮೂಲಕವೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಆರ್‌ಪಿಎಫ್‌ ಪ್ರಶ್ನೆ ಪತ್ರಿಕೆಯಲ್ಲಿ 100 ಅಂಕಗಳಲ್ಲಿ 25 ಅಂಕ ಹಿಂದಿ ಗ್ರಹಿಕೆಗೆ ಮೀಸಲಾಗಿದೆ. ಆದರೆ ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯೋಜನವಾಗುತ್ತಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

17 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

9 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

22 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

23 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago