ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು.
ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈಗ ಕೊಲೆ ಭಾಗ್ಯ ಸೇರ್ಪಡೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಜೈನ ಮುನಿ ಹತ್ಯೆ ದೇಶ ಬೆಚ್ಚಿ ಬಿದ್ದಿದೆ. ಇದರ ಹಿಂದೆ ವಿದೇಶಿ ಸಂಚು ಇದೆ. ಅದಕ್ಕೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು. ಟಿ ನರಸೀಪುರದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮಲ್ಲಿ ಮೆರವಣಿಗೆಯಲ್ಲೇ ರಾಜಾರೋಷವಾಗಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯಾಗಿದೆ. ಜನರು ಭಯದಲ್ಲಿ ಇದ್ದಾರೆ. ಬೆಂಗಳೂರಿನಲ್ಲಿ ಜೋಡಿ ಕೊಲೆ ಆಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.
ನಾವು ಅಧಿಕಾರದಲ್ಲಿ ಇದ್ದಾಗ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ್ದ ಕಿಡಿಗೇಡಿಗಳನ್ನು ಹಡೆಮುರಿ ಕಟ್ಟಿದ್ದೆವು. ಆದರೆ ಇವಾಗ ಪಾಕಿಸ್ತಾನದ ಜಿಂದಾಬಾದ್ ಕೂಗುವ ಮಟ್ಟಕ್ಕೆ ಜನರು ಬಂದಿದ್ದಾರೆ. ಪೊಲೀಸರ ಹಾಗೂ ಕಾನೂನು ಸುವ್ಯವಸ್ಥೆಯ ಭಯ ಇಲ್ಲ, ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿ ಹೋಗಿದೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ಮನವಿ ಮಾಡುತ್ತೇವೆ. ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…