ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು.
ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈಗ ಕೊಲೆ ಭಾಗ್ಯ ಸೇರ್ಪಡೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಜೈನ ಮುನಿ ಹತ್ಯೆ ದೇಶ ಬೆಚ್ಚಿ ಬಿದ್ದಿದೆ. ಇದರ ಹಿಂದೆ ವಿದೇಶಿ ಸಂಚು ಇದೆ. ಅದಕ್ಕೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು. ಟಿ ನರಸೀಪುರದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮಲ್ಲಿ ಮೆರವಣಿಗೆಯಲ್ಲೇ ರಾಜಾರೋಷವಾಗಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯಾಗಿದೆ. ಜನರು ಭಯದಲ್ಲಿ ಇದ್ದಾರೆ. ಬೆಂಗಳೂರಿನಲ್ಲಿ ಜೋಡಿ ಕೊಲೆ ಆಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.
ನಾವು ಅಧಿಕಾರದಲ್ಲಿ ಇದ್ದಾಗ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ್ದ ಕಿಡಿಗೇಡಿಗಳನ್ನು ಹಡೆಮುರಿ ಕಟ್ಟಿದ್ದೆವು. ಆದರೆ ಇವಾಗ ಪಾಕಿಸ್ತಾನದ ಜಿಂದಾಬಾದ್ ಕೂಗುವ ಮಟ್ಟಕ್ಕೆ ಜನರು ಬಂದಿದ್ದಾರೆ. ಪೊಲೀಸರ ಹಾಗೂ ಕಾನೂನು ಸುವ್ಯವಸ್ಥೆಯ ಭಯ ಇಲ್ಲ, ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿ ಹೋಗಿದೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ಮನವಿ ಮಾಡುತ್ತೇವೆ. ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…