BREAKING NEWS

ಮೈಸೂರು-ಕೊಡಗು ಲೋಕ ಅಭ್ಯರ್ಥಿ ಆಯ್ಕೆ ಬಗ್ಗೆ ಪ್ರತಾಪ್‌ ಸಿಂಹ ಅಚ್ಚರಿಯ ಹೇಳಿಕೆ!

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್‌ ಸಿಂಹ ಬದಲಿಗೆ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸ್ಪರ್ಧಿಸಲಿದ್ದಾರೆ ಎಂದು ಎಲ್ಲಡೆ ಸುದ್ದಿಯಾಗಿದ್ದು, ಲೋಕಸಭಾ ಚುನಾವಣೆ ಸಂಬಂಧ ಮೈಸೂರಲ್ಲಿಂದು (ಮಾ.೯) ಮಾಧ್ಯಮಗಳೊಂದಿಗೆ ಸಂಸದ ಸಿಂಹ ಮಾತನಾಡಿದ್ದಾರೆ.

ಕರ್ನಾಟಕದಿಂದ ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾದವರಲ್ಲಿ ಕೇವಲ ತೇಜಸ್ವೀ ಸೂರ್ಯ ಮಾತ್ರ ಮೊದಲ ಬಾರಿಗೆ ಸಂಸದರಾಗಿದ್ದವರು ಮತ್ತು ತಾನು ಎರಡನೇ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದೆ. ಆದರೆ ಉಳಿದವರೆಲ್ಲ ಐದಾರು ಬಾರಿ ಅಯ್ಕೆಯಾದವರು, ಹಾಗಾಗಿ ತನಗೆ ಮತ್ತೊಮ್ಮೆ ಸ್ಪರ್ಧಿಸುವ ಅವಕಾಶ ಸಿಗಬೇಕು ಎಂದು ಇಂಗಿತ ವ್ಯಕ್ತಪಡಿಸಿದರು.

ನಾನು ಸಂಸದನಾಗಿ ಕ್ಷೇತ್ರಕ್ಕೆ ಆಯ್ಕೆಯಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದೇನೆ. ಎರಡು ಅವಧಿಗಳಲ್ಲೂ ಹಿಂದೂತ್ವ ಮತ್ತು ಅಭಿವೃದ್ಧಿ ಕೆಲಸಗಳೇ ತನ್ನ ದ್ಯೇಯಗಳಾಗಿದ್ದವು ಎಂದರು.

ಸಂಸದನಾಗಿ ನಾನು ಮಾಡದ ಕೆಲಸ ಯಾವುದೂ ಇಲ್ಲ, ಇದಕ್ಕೆ ನನಗೆ ಮತ ನೀಡಿ ಗೆಲ್ಲಿಸಿದ ಜನರೇ ಸಾಕ್ಷಿಯಾಗಿದ್ದಾರೆ. ಅಂತಿಮವಾಗಿ ಯಾರೇ ತನ್ನ ಕೈಬಿಟ್ಟರೂ ತಾಯಿ ಚಾಮುಂಡೇಶ್ವರಿ ಕೈ ಬಿಡಲ್ಲ ಎಂದು ಪ್ರತಾಪ್‌ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

4 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

4 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

4 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

4 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

5 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

5 hours ago