BREAKING NEWS

ಮೈಸೂರು-ಕೊಡಗು ಲೋಕ ಅಭ್ಯರ್ಥಿ ಆಯ್ಕೆ ಬಗ್ಗೆ ಪ್ರತಾಪ್‌ ಸಿಂಹ ಅಚ್ಚರಿಯ ಹೇಳಿಕೆ!

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್‌ ಸಿಂಹ ಬದಲಿಗೆ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸ್ಪರ್ಧಿಸಲಿದ್ದಾರೆ ಎಂದು ಎಲ್ಲಡೆ ಸುದ್ದಿಯಾಗಿದ್ದು, ಲೋಕಸಭಾ ಚುನಾವಣೆ ಸಂಬಂಧ ಮೈಸೂರಲ್ಲಿಂದು (ಮಾ.೯) ಮಾಧ್ಯಮಗಳೊಂದಿಗೆ ಸಂಸದ ಸಿಂಹ ಮಾತನಾಡಿದ್ದಾರೆ.

ಕರ್ನಾಟಕದಿಂದ ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾದವರಲ್ಲಿ ಕೇವಲ ತೇಜಸ್ವೀ ಸೂರ್ಯ ಮಾತ್ರ ಮೊದಲ ಬಾರಿಗೆ ಸಂಸದರಾಗಿದ್ದವರು ಮತ್ತು ತಾನು ಎರಡನೇ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದೆ. ಆದರೆ ಉಳಿದವರೆಲ್ಲ ಐದಾರು ಬಾರಿ ಅಯ್ಕೆಯಾದವರು, ಹಾಗಾಗಿ ತನಗೆ ಮತ್ತೊಮ್ಮೆ ಸ್ಪರ್ಧಿಸುವ ಅವಕಾಶ ಸಿಗಬೇಕು ಎಂದು ಇಂಗಿತ ವ್ಯಕ್ತಪಡಿಸಿದರು.

ನಾನು ಸಂಸದನಾಗಿ ಕ್ಷೇತ್ರಕ್ಕೆ ಆಯ್ಕೆಯಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದೇನೆ. ಎರಡು ಅವಧಿಗಳಲ್ಲೂ ಹಿಂದೂತ್ವ ಮತ್ತು ಅಭಿವೃದ್ಧಿ ಕೆಲಸಗಳೇ ತನ್ನ ದ್ಯೇಯಗಳಾಗಿದ್ದವು ಎಂದರು.

ಸಂಸದನಾಗಿ ನಾನು ಮಾಡದ ಕೆಲಸ ಯಾವುದೂ ಇಲ್ಲ, ಇದಕ್ಕೆ ನನಗೆ ಮತ ನೀಡಿ ಗೆಲ್ಲಿಸಿದ ಜನರೇ ಸಾಕ್ಷಿಯಾಗಿದ್ದಾರೆ. ಅಂತಿಮವಾಗಿ ಯಾರೇ ತನ್ನ ಕೈಬಿಟ್ಟರೂ ತಾಯಿ ಚಾಮುಂಡೇಶ್ವರಿ ಕೈ ಬಿಡಲ್ಲ ಎಂದು ಪ್ರತಾಪ್‌ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago