BREAKING NEWS

ಮೈಸೂರು-ಕೊಡಗು ಲೋಕ ಅಭ್ಯರ್ಥಿ ಆಯ್ಕೆ ಬಗ್ಗೆ ಪ್ರತಾಪ್‌ ಸಿಂಹ ಅಚ್ಚರಿಯ ಹೇಳಿಕೆ!

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್‌ ಸಿಂಹ ಬದಲಿಗೆ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸ್ಪರ್ಧಿಸಲಿದ್ದಾರೆ ಎಂದು ಎಲ್ಲಡೆ ಸುದ್ದಿಯಾಗಿದ್ದು, ಲೋಕಸಭಾ ಚುನಾವಣೆ ಸಂಬಂಧ ಮೈಸೂರಲ್ಲಿಂದು (ಮಾ.೯) ಮಾಧ್ಯಮಗಳೊಂದಿಗೆ ಸಂಸದ ಸಿಂಹ ಮಾತನಾಡಿದ್ದಾರೆ.

ಕರ್ನಾಟಕದಿಂದ ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾದವರಲ್ಲಿ ಕೇವಲ ತೇಜಸ್ವೀ ಸೂರ್ಯ ಮಾತ್ರ ಮೊದಲ ಬಾರಿಗೆ ಸಂಸದರಾಗಿದ್ದವರು ಮತ್ತು ತಾನು ಎರಡನೇ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದೆ. ಆದರೆ ಉಳಿದವರೆಲ್ಲ ಐದಾರು ಬಾರಿ ಅಯ್ಕೆಯಾದವರು, ಹಾಗಾಗಿ ತನಗೆ ಮತ್ತೊಮ್ಮೆ ಸ್ಪರ್ಧಿಸುವ ಅವಕಾಶ ಸಿಗಬೇಕು ಎಂದು ಇಂಗಿತ ವ್ಯಕ್ತಪಡಿಸಿದರು.

ನಾನು ಸಂಸದನಾಗಿ ಕ್ಷೇತ್ರಕ್ಕೆ ಆಯ್ಕೆಯಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದೇನೆ. ಎರಡು ಅವಧಿಗಳಲ್ಲೂ ಹಿಂದೂತ್ವ ಮತ್ತು ಅಭಿವೃದ್ಧಿ ಕೆಲಸಗಳೇ ತನ್ನ ದ್ಯೇಯಗಳಾಗಿದ್ದವು ಎಂದರು.

ಸಂಸದನಾಗಿ ನಾನು ಮಾಡದ ಕೆಲಸ ಯಾವುದೂ ಇಲ್ಲ, ಇದಕ್ಕೆ ನನಗೆ ಮತ ನೀಡಿ ಗೆಲ್ಲಿಸಿದ ಜನರೇ ಸಾಕ್ಷಿಯಾಗಿದ್ದಾರೆ. ಅಂತಿಮವಾಗಿ ಯಾರೇ ತನ್ನ ಕೈಬಿಟ್ಟರೂ ತಾಯಿ ಚಾಮುಂಡೇಶ್ವರಿ ಕೈ ಬಿಡಲ್ಲ ಎಂದು ಪ್ರತಾಪ್‌ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

12 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

13 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

14 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

15 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

15 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

16 hours ago