ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್ ಸಿಂಹ ಬದಲಿಗೆ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸಲಿದ್ದಾರೆ ಎಂದು ಎಲ್ಲಡೆ ಸುದ್ದಿಯಾಗಿದ್ದು, ಲೋಕಸಭಾ ಚುನಾವಣೆ ಸಂಬಂಧ ಮೈಸೂರಲ್ಲಿಂದು (ಮಾ.೯) ಮಾಧ್ಯಮಗಳೊಂದಿಗೆ ಸಂಸದ ಸಿಂಹ ಮಾತನಾಡಿದ್ದಾರೆ.
ಕರ್ನಾಟಕದಿಂದ ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾದವರಲ್ಲಿ ಕೇವಲ ತೇಜಸ್ವೀ ಸೂರ್ಯ ಮಾತ್ರ ಮೊದಲ ಬಾರಿಗೆ ಸಂಸದರಾಗಿದ್ದವರು ಮತ್ತು ತಾನು ಎರಡನೇ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದೆ. ಆದರೆ ಉಳಿದವರೆಲ್ಲ ಐದಾರು ಬಾರಿ ಅಯ್ಕೆಯಾದವರು, ಹಾಗಾಗಿ ತನಗೆ ಮತ್ತೊಮ್ಮೆ ಸ್ಪರ್ಧಿಸುವ ಅವಕಾಶ ಸಿಗಬೇಕು ಎಂದು ಇಂಗಿತ ವ್ಯಕ್ತಪಡಿಸಿದರು.
ನಾನು ಸಂಸದನಾಗಿ ಕ್ಷೇತ್ರಕ್ಕೆ ಆಯ್ಕೆಯಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದೇನೆ. ಎರಡು ಅವಧಿಗಳಲ್ಲೂ ಹಿಂದೂತ್ವ ಮತ್ತು ಅಭಿವೃದ್ಧಿ ಕೆಲಸಗಳೇ ತನ್ನ ದ್ಯೇಯಗಳಾಗಿದ್ದವು ಎಂದರು.
ಸಂಸದನಾಗಿ ನಾನು ಮಾಡದ ಕೆಲಸ ಯಾವುದೂ ಇಲ್ಲ, ಇದಕ್ಕೆ ನನಗೆ ಮತ ನೀಡಿ ಗೆಲ್ಲಿಸಿದ ಜನರೇ ಸಾಕ್ಷಿಯಾಗಿದ್ದಾರೆ. ಅಂತಿಮವಾಗಿ ಯಾರೇ ತನ್ನ ಕೈಬಿಟ್ಟರೂ ತಾಯಿ ಚಾಮುಂಡೇಶ್ವರಿ ಕೈ ಬಿಡಲ್ಲ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…