BREAKING NEWS

ಅಮರನಾಥ ಯಾತ್ರೆಗೆ ತೆರಳಿರುವವರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಭರವಸೆ

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಭಾರಿ ಮಳೆ ಹಿನ್ನೆಲೆ ಹೆಲಿಕಾಪ್ಟರ್ ಮತ್ತು ವಿಮಾನದ ಮೂಲಕ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಬೆಟ್ಟ ಗುಡ್ಡಗಳ ಕಡಿದಾದ, ದುರ್ಗಮ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದು, ಮಳೆ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯ ನಡೆಸಲಾಗುತ್ತದೆ. ಉತ್ತರಕಾಂಡದ ಪ್ರದೇಶಿಕ ಆಯುಕ್ತರು , ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದರು.

ಇನ್ನು ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ತೆರಳಿದ್ದರು. ದೇವರ ದರ್ಶನ ಪಡೆದು ಮರಳಿ ಬರುವಾಗ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ಯಾತ್ರಿಗಳ ಜೊತೆ ಗದಗ ಡಿಸಿ ವೈಶಾಲಿ ಸಂಪರ್ಕಯಾತ್ರಿಗಳನ್ನು ಗದಗ ಜಿಲ್ಲಾಕಾರಿ ವೈಶಾಲಿ ಸಂಪರ್ಕಿಸಿದ್ದು, ಹೆಲಿಕಾಪ್ಟರ್ ಕಳಿಸಿ ನಮ್ಮನ್ನು ರಕ್ಷಣೆ ಮಾಡಿ ಅಂತ ಯಾತ್ರಿಗಳು ಮನವಿ ಮಾಡಿದ್ದಾರೆ. ಗಾಬರಿಯಲ್ಲಿದ್ದರು, ಆದರೂ ಎಲ್ಲರೂ ಸೇಫ್ ಜಾಗದಲ್ಲಿ ಇದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ಐಎಎಸ್ ಅಕಾರಿ ತುಳಸಿ ಮದ್ದಿನೇನಿ ಅವರೊಂದಿಗೆ ರಶ್ಮಿ ಆವರು ಸಂಪರ್ಕದಲ್ಲಿದ್ದಾರೆ ಯಾತ್ರಿಗಳ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಊಟ, ಉಪಹಾರ ಯಾವುದೇ ಸಮಸ್ಯೆ ಇಲ್ಲ. ಕೂಡಲೇ ಅಲ್ಲಿಂದ ರಕ್ಷಣೆ ಮಾಡಲಾಗುತ್ತೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಮಾಹಿತಿ ನೀಡಿದ್ದಾರೆ.

ಹಾಗೇ ಧಾರವಾಡ ಜಿಲ್ಲೆಯಿಂದ ತೆರಳಿದ್ದ ಐವರು ಯಾತ್ರಿಕರು ಪಂಚತೀರಣಿ ಬಳಿ ನಾಲ್ಕು ದಿನಗಳಿಂದ ಸಿಲುಕಿದ್ದಾರೆ. ವಿಠ್ಠಲ ಬಾಚಗುಂಡಿ, ರಾಕೇಶ ನಾಜರೆ, ಹರೀಶ ಸಾಳುಂಕೆ, ನಾಗರಾಜ ಹಳಕಟ್ಟಿ, ಮಡಿವಾಳಪ್ಪ ಕೊಟಬಾಗಿ ಸಿಲುಕಿದ ಯುವಕರು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ಮಳೆ ಹಿನ್ನೆಲೆ ಕಾಶ್ಮೀರ ಕಣಿವೆಯ ಬಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸತತ ಎರಡನೇ ದಿನವೂ ಸ್ಥಗಿತಗೊಳಿಸಲಾಗಿದೆ.

ಅದರಂತೆ, ಜಮ್ಮುವಿನಿಂದ ಕಾಶ್ಮೀರಕ್ಕೆ ಯಾವುದೇ ಹೊಸ ಯಾತ್ರಾರ್ಥಿಗಳಿಗೆ ತೆರಳಲು ಅವಕಾಶವಿಲ್ಲ. ಹಿಲ್ಲರ್ ಅನಂತನಾಗ್ ರೈಲು ನಿಲ್ದಾಣದಲ್ಲಿ ನೀರು ನಿಂತಿದ್ದರಿಂದ ಖಾಜಿಗುಂಡ್ ಮತ್ತು ಬನಿಹಾಲ್ ನಡುವಿನ ರೈಲು ಸಂಚಾರಗಳನ್ನೂ ಸ್ಥಗಿತಗೊಳಿಸಲಾಗಿದೆ.

andolanait

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

6 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

7 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

8 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

9 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

10 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

11 hours ago