ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಭಾರಿ ಮಳೆ ಹಿನ್ನೆಲೆ ಹೆಲಿಕಾಪ್ಟರ್ ಮತ್ತು ವಿಮಾನದ ಮೂಲಕ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಬೆಟ್ಟ ಗುಡ್ಡಗಳ ಕಡಿದಾದ, ದುರ್ಗಮ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದು, ಮಳೆ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯ ನಡೆಸಲಾಗುತ್ತದೆ. ಉತ್ತರಕಾಂಡದ ಪ್ರದೇಶಿಕ ಆಯುಕ್ತರು , ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದರು.
ಇನ್ನು ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ತೆರಳಿದ್ದರು. ದೇವರ ದರ್ಶನ ಪಡೆದು ಮರಳಿ ಬರುವಾಗ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ಯಾತ್ರಿಗಳ ಜೊತೆ ಗದಗ ಡಿಸಿ ವೈಶಾಲಿ ಸಂಪರ್ಕಯಾತ್ರಿಗಳನ್ನು ಗದಗ ಜಿಲ್ಲಾಕಾರಿ ವೈಶಾಲಿ ಸಂಪರ್ಕಿಸಿದ್ದು, ಹೆಲಿಕಾಪ್ಟರ್ ಕಳಿಸಿ ನಮ್ಮನ್ನು ರಕ್ಷಣೆ ಮಾಡಿ ಅಂತ ಯಾತ್ರಿಗಳು ಮನವಿ ಮಾಡಿದ್ದಾರೆ. ಗಾಬರಿಯಲ್ಲಿದ್ದರು, ಆದರೂ ಎಲ್ಲರೂ ಸೇಫ್ ಜಾಗದಲ್ಲಿ ಇದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ಐಎಎಸ್ ಅಕಾರಿ ತುಳಸಿ ಮದ್ದಿನೇನಿ ಅವರೊಂದಿಗೆ ರಶ್ಮಿ ಆವರು ಸಂಪರ್ಕದಲ್ಲಿದ್ದಾರೆ ಯಾತ್ರಿಗಳ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಊಟ, ಉಪಹಾರ ಯಾವುದೇ ಸಮಸ್ಯೆ ಇಲ್ಲ. ಕೂಡಲೇ ಅಲ್ಲಿಂದ ರಕ್ಷಣೆ ಮಾಡಲಾಗುತ್ತೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಮಾಹಿತಿ ನೀಡಿದ್ದಾರೆ.
ಹಾಗೇ ಧಾರವಾಡ ಜಿಲ್ಲೆಯಿಂದ ತೆರಳಿದ್ದ ಐವರು ಯಾತ್ರಿಕರು ಪಂಚತೀರಣಿ ಬಳಿ ನಾಲ್ಕು ದಿನಗಳಿಂದ ಸಿಲುಕಿದ್ದಾರೆ. ವಿಠ್ಠಲ ಬಾಚಗುಂಡಿ, ರಾಕೇಶ ನಾಜರೆ, ಹರೀಶ ಸಾಳುಂಕೆ, ನಾಗರಾಜ ಹಳಕಟ್ಟಿ, ಮಡಿವಾಳಪ್ಪ ಕೊಟಬಾಗಿ ಸಿಲುಕಿದ ಯುವಕರು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ಮಳೆ ಹಿನ್ನೆಲೆ ಕಾಶ್ಮೀರ ಕಣಿವೆಯ ಬಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸತತ ಎರಡನೇ ದಿನವೂ ಸ್ಥಗಿತಗೊಳಿಸಲಾಗಿದೆ.
ಅದರಂತೆ, ಜಮ್ಮುವಿನಿಂದ ಕಾಶ್ಮೀರಕ್ಕೆ ಯಾವುದೇ ಹೊಸ ಯಾತ್ರಾರ್ಥಿಗಳಿಗೆ ತೆರಳಲು ಅವಕಾಶವಿಲ್ಲ. ಹಿಲ್ಲರ್ ಅನಂತನಾಗ್ ರೈಲು ನಿಲ್ದಾಣದಲ್ಲಿ ನೀರು ನಿಂತಿದ್ದರಿಂದ ಖಾಜಿಗುಂಡ್ ಮತ್ತು ಬನಿಹಾಲ್ ನಡುವಿನ ರೈಲು ಸಂಚಾರಗಳನ್ನೂ ಸ್ಥಗಿತಗೊಳಿಸಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…