BREAKING NEWS

18 ಸಾವಿರ ನೋಟ್‌ಬುಕ್‌ ಬಳಸಿ ಅಂಬೇಡ್ಕರ್‌ ಭಾವಚಿತ್ರ ರಚನೆ

ಮಹಾರಾಷ್ಟ್ರ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್‌ಬುಕ್‌ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ 18 ಕಲಾವಿದರ ಕೈಚಳಕವಿದೆ.
ಪ್ರತಿವರ್ಷ ಏ‍ಪ್ರಿಲ್‌ 14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಿ. ಆರ್‌ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಭಾವಚಿತ್ರ ಪ್ರದರ್ಶನದ ಮುಂದಾಳತ್ವ ವಹಿಸಿದ್ದ ಲಾತೂರ್ ಬಿಜೆಪಿ ಲೋಕಸಭಾ ಸದಸ್ಯ ಸುಧಾಕರ ಶ್ರಂಗಾರೆ ಹೇಳಿದ್ದಾರೆ.

11 ಸಾವಿರ ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ 100*110 ಅಡಿ ಎತ್ತರದ ಭಾವಚಿತ್ರವನ್ನು ತಯಾರಿಸಲಾಗಿದೆ.
ಸಾಮಾಜಿಕ ಬದ್ಧತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರದರ್ಶನದ ನಂತರ ಈ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಂಚಲಾಗುತ್ತದೆ ಎಂದು ಸುಧಾಕರ ಶ್ರಂಗಾರೆ ತಿಳಿಸಿದ್ದಾರೆ.

lokesh

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

5 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

5 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

7 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

7 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

7 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

9 hours ago