ಮಹಾರಾಷ್ಟ್ರ : ಅಂಬೇಡ್ಕರ್ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್ಬುಕ್ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ 18 ಕಲಾವಿದರ ಕೈಚಳಕವಿದೆ.
ಪ್ರತಿವರ್ಷ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಿ. ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಭಾವಚಿತ್ರ ಪ್ರದರ್ಶನದ ಮುಂದಾಳತ್ವ ವಹಿಸಿದ್ದ ಲಾತೂರ್ ಬಿಜೆಪಿ ಲೋಕಸಭಾ ಸದಸ್ಯ ಸುಧಾಕರ ಶ್ರಂಗಾರೆ ಹೇಳಿದ್ದಾರೆ.
11 ಸಾವಿರ ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ 100*110 ಅಡಿ ಎತ್ತರದ ಭಾವಚಿತ್ರವನ್ನು ತಯಾರಿಸಲಾಗಿದೆ.
ಸಾಮಾಜಿಕ ಬದ್ಧತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರದರ್ಶನದ ನಂತರ ಈ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಂಚಲಾಗುತ್ತದೆ ಎಂದು ಸುಧಾಕರ ಶ್ರಂಗಾರೆ ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…