ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ, ಪರಸ್ಪರ ನೆರವು ನೀಡಲಾಗುತ್ತಿದೆ. ಅಮೆರಿಕದ ಜನತೆಗೆ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಹೇಳಿದರು. ಜತೆಗೆ, ತಮಗೆ ಆತ್ಮೀಯ ಸ್ವಾಗತ ಕೋರಿದ ಅಧ್ಯಕ್ಷ ಜೋ ಬೈಡನ್ ಹಾಗೂ ಅಮೆರಿಕದ ಜನತೆಗೆ ಧನ್ಯವಾದ ಸಮರ್ಪಿಸಿದರು.
ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು. ಭಾರತೀಯ ಸಮುದಾಯದವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರನ್ನುದ್ದೇಶಿಸಿ ‘ನೀವು ಭಾರತ ನಿಜವಾದ ಶಕ್ತಿ’ ಎಂದು ಬಣ್ಣಿಸಿದರು.
ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಸಂಬಂಧ ಹೆಚ್ಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಶ್ವೇತಭವನಕ್ಕೆ ಕರೆದೊಯ್ದ ಜೋ ಬೈಡನ್ ಅವರು, ಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಇದೆ. ಉಭಯ ರಾಷ್ಟ್ರಗಳು 3 ಪದಗಳ ‘ವಿ ದ ಪೀಪಲ್’ ಬಾಂಧವ್ಯ ಹೊಂದಿದ್ದೇವೆ. ಹಲವು ವಿಚಾರಗಳಲ್ಲಿ ಅಮೆರಿಕ-ಭಾರತ ನಡುವೆ ಸಾಮ್ಯತೆ ಇದೆ. ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಎರಡೂ ರಾಷ್ಟ್ರಗಳ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಇದು ಒಂದಾಗಿದೆ. ಇಂಡೋ-ಪೆಸಿಫಿಕ್ ಸಂಬಂಧ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.
ಮೋದಿ ಅವರನ್ನು ಶ್ವೇತಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಭಾರತೀಯ ಸಮುದಾಯದ ಜನರು ಮತ್ತು ಇತರ ಅತಿಥಿಗಳು ಸ್ವಾಗತಿಸಿದರು.
ಶ್ವೇತಭವನದ ಆವರಣಕ್ಕೆ ಆಗಮಿಸಿದ ಮೋದಿ ಅವರಿಗೆ ಅಮೆರಿಕದ ಸೇನಾ ಪಡೆಗಳು ಗೌರವ ಸಲ್ಲಿಸಿದರು. ಮೋದಿ ಅವರು ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದ ನಂತರ ‘ಮೋದಿ ಮೋದಿ’ ಘೋಷಣೆ ಕೇಳಿಬಂತು.
ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಮಹತ್ವದ ಜಾಗತಿಕ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಅನೇಕ ಒಪ್ಪಂದಹಗಳಿಗೆ ಉಭಯ ನಾಯಕರು ಸಹಿ ಹಾಕಿದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…