BREAKING NEWS

ಅಮೆರಿಕ, ಭಾರತದ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ; ಶ್ವೇತಭವನದಲ್ಲಿ ಪ್ರಧಾನಿ ಮೋದಿ

ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ, ಪರಸ್ಪರ ನೆರವು ನೀಡಲಾಗುತ್ತಿದೆ. ಅಮೆರಿಕದ ಜನತೆಗೆ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಹೇಳಿದರು. ಜತೆಗೆ, ತಮಗೆ ಆತ್ಮೀಯ ಸ್ವಾಗತ ಕೋರಿದ ಅಧ್ಯಕ್ಷ ಜೋ ಬೈಡನ್​​ ಹಾಗೂ ಅಮೆರಿಕದ ಜನತೆಗೆ ಧನ್ಯವಾದ ಸಮರ್ಪಿಸಿದರು.

ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು. ಭಾರತೀಯ ಸಮುದಾಯದವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರನ್ನುದ್ದೇಶಿಸಿ ‘ನೀವು ಭಾರತ ನಿಜವಾದ ಶಕ್ತಿ’ ಎಂದು ಬಣ್ಣಿಸಿದರು.

ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಸಂಬಂಧ ಹೆಚ್ಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಶ್ವೇತಭವನಕ್ಕೆ ಕರೆದೊಯ್ದ ಜೋ ಬೈಡನ್ ಅವರು, ಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಇದೆ. ಉಭಯ ರಾಷ್ಟ್ರಗಳು 3 ಪದಗಳ ‘ವಿ ದ ಪೀಪಲ್’​ ಬಾಂಧವ್ಯ ಹೊಂದಿದ್ದೇವೆ. ಹಲವು ವಿಚಾರಗಳಲ್ಲಿ ಅಮೆರಿಕ-ಭಾರತ ನಡುವೆ ಸಾಮ್ಯತೆ ಇದೆ. ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಎರಡೂ ರಾಷ್ಟ್ರಗಳ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಇದು ಒಂದಾಗಿದೆ. ಇಂಡೋ-ಪೆಸಿಫಿಕ್​​ ಸಂಬಂಧ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.

ಮೋದಿ ಅವರನ್ನು ಶ್ವೇತಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಭಾರತೀಯ ಸಮುದಾಯದ ಜನರು ಮತ್ತು ಇತರ ಅತಿಥಿಗಳು ಸ್ವಾಗತಿಸಿದರು.

ಶ್ವೇತಭವನದ ಆವರಣಕ್ಕೆ ಆಗಮಿಸಿದ ಮೋದಿ ಅವರಿಗೆ ಅಮೆರಿಕದ ಸೇನಾ ಪಡೆಗಳು ಗೌರವ ಸಲ್ಲಿಸಿದರು. ಮೋದಿ ಅವರು ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದ ನಂತರ ‘ಮೋದಿ ಮೋದಿ’ ಘೋಷಣೆ ಕೇಳಿಬಂತು.

ಮೋದಿ – ಬೈಡನ್ ದ್ವಿಪಕ್ಷೀಯ ಮಾತುಕತೆ

ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಮಹತ್ವದ ಜಾಗತಿಕ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಅನೇಕ ಒಪ್ಪಂದಹಗಳಿಗೆ ಉಭಯ ನಾಯಕರು ಸಹಿ ಹಾಕಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

9 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

9 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

11 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

19 hours ago