BREAKING NEWS

ಅಮೆರಿಕ, ಭಾರತದ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ; ಶ್ವೇತಭವನದಲ್ಲಿ ಪ್ರಧಾನಿ ಮೋದಿ

ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ, ಪರಸ್ಪರ ನೆರವು ನೀಡಲಾಗುತ್ತಿದೆ. ಅಮೆರಿಕದ ಜನತೆಗೆ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಹೇಳಿದರು. ಜತೆಗೆ, ತಮಗೆ ಆತ್ಮೀಯ ಸ್ವಾಗತ ಕೋರಿದ ಅಧ್ಯಕ್ಷ ಜೋ ಬೈಡನ್​​ ಹಾಗೂ ಅಮೆರಿಕದ ಜನತೆಗೆ ಧನ್ಯವಾದ ಸಮರ್ಪಿಸಿದರು.

ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು. ಭಾರತೀಯ ಸಮುದಾಯದವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರನ್ನುದ್ದೇಶಿಸಿ ‘ನೀವು ಭಾರತ ನಿಜವಾದ ಶಕ್ತಿ’ ಎಂದು ಬಣ್ಣಿಸಿದರು.

ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಸಂಬಂಧ ಹೆಚ್ಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಶ್ವೇತಭವನಕ್ಕೆ ಕರೆದೊಯ್ದ ಜೋ ಬೈಡನ್ ಅವರು, ಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಇದೆ. ಉಭಯ ರಾಷ್ಟ್ರಗಳು 3 ಪದಗಳ ‘ವಿ ದ ಪೀಪಲ್’​ ಬಾಂಧವ್ಯ ಹೊಂದಿದ್ದೇವೆ. ಹಲವು ವಿಚಾರಗಳಲ್ಲಿ ಅಮೆರಿಕ-ಭಾರತ ನಡುವೆ ಸಾಮ್ಯತೆ ಇದೆ. ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಎರಡೂ ರಾಷ್ಟ್ರಗಳ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಇದು ಒಂದಾಗಿದೆ. ಇಂಡೋ-ಪೆಸಿಫಿಕ್​​ ಸಂಬಂಧ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.

ಮೋದಿ ಅವರನ್ನು ಶ್ವೇತಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಭಾರತೀಯ ಸಮುದಾಯದ ಜನರು ಮತ್ತು ಇತರ ಅತಿಥಿಗಳು ಸ್ವಾಗತಿಸಿದರು.

ಶ್ವೇತಭವನದ ಆವರಣಕ್ಕೆ ಆಗಮಿಸಿದ ಮೋದಿ ಅವರಿಗೆ ಅಮೆರಿಕದ ಸೇನಾ ಪಡೆಗಳು ಗೌರವ ಸಲ್ಲಿಸಿದರು. ಮೋದಿ ಅವರು ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದ ನಂತರ ‘ಮೋದಿ ಮೋದಿ’ ಘೋಷಣೆ ಕೇಳಿಬಂತು.

ಮೋದಿ – ಬೈಡನ್ ದ್ವಿಪಕ್ಷೀಯ ಮಾತುಕತೆ

ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಮಹತ್ವದ ಜಾಗತಿಕ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಅನೇಕ ಒಪ್ಪಂದಹಗಳಿಗೆ ಉಭಯ ನಾಯಕರು ಸಹಿ ಹಾಕಿದರು.

andolanait

Recent Posts

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 hour ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

1 hour ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

1 hour ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

1 hour ago

ಪುಟ್ಟರಂಗಶೆಟ್ಟಿ, ಎಆರ್‌ಕೆ: ಯಾರಿಗೆ ಮಂತ್ರಿ ಭಾಗ್ಯ?

ರಾಜೇಶ್ ಬೆಂಡರವಾಡಿ ಯಾರೂ ಹೆಚ್ಚು, ಯಾರೂ ಕಮ್ಮಿ ಇಲ್ಲ ಎಂಬಂತೆ ಚಾ.ನಗರದ ಈ ಇಬ್ಬರ ಹೆಸರು ಹೈಕಮಾಂಡ್ ಅಂಗಳದಲ್ಲಿ ಚಾಮರಾಜನಗರ:…

2 hours ago