BREAKING NEWS

ದಲೈಲಾಮಾ ನಡೆ ಖಂಡಿಸಿ ಟ್ವೀಟ್‌ ಮಾಡಿದ ಅಮೆರಿಕದ ರ್‍ಯಾಪರ್ ಕಾರ್ಡಿ ಬಿ

ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಅವರು ‘ಬಾಲಕನಲ್ಲಿ ನಾಲಿಗೆ ಚೀಪುವಂತೆ‘ ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧರ್ಮಗುರುಗಳ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿರುವ ಅಮೆರಿಕದ ಖ್ಯಾತ ರ್‍ಯಾಪ್‌ ಹಾಡುಗಾರ್ತಿ ಕಾರ್ಡಿ ಬಿ, ‘ನಿಮ್ಮ ಮಕ್ಕಳನ್ನು ಭಕ್ಷಕರಿಂದ ದೂರವಿಡಿ‘ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದಲೈಲಾಮಾ ಬಾಲಕನೊಬ್ಬನ ತುಟಿಗೆ ಚುಂಬಿಸಿದ್ದಾರೆ. ನಂತರ ಬಾಲಕನಿಗೆ ತಮ್ಮ ನಾಲಿಗೆ ಚೀಪುವಂತೆ ಹೇಳಿದ್ದಾರೆ. ಬಾಲಕ ಧರ್ಮಗುರುಗಳು ಹೇಳಿದ ಹಾಗೆ ನಾಲಿಗೆ ಚೀಪಲು ಮುಂದಾಗಿದ್ದನು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಹಲವರು ಧರ್ಮಗುರುಗಳ ನಡೆಯನ್ನು ಖಂಡಿಸಿದ್ದರು. ವಿರೋಧ ವ್ಯಕ್ತವಾಗುತ್ತಲೇ ದಲೈಲಾಮಾ ಬಾಲಕ ಮತ್ತು ಆತನ ಪೋಷಕರಲ್ಲಿ ಕ್ಷಮೆಯಾಚಿಸಿದ್ದರು.

ಈ ವಿಡಿಯೊಗೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ ಕಾರ್ಡಿ ಬಿ, ‘ಪ್ರಪಂಚದ ತುಂಬಾ ವಿನಾಶಕಾರಿ ಭಕ್ಷಕರಿದ್ದು, ಮುಗ್ಧ ಅಮಾಯಕ ಜನರು, ಮಕ್ಕಳನ್ನು ಅವರು ಮೊದಲು ಭೇಟೆಯಾಡುತ್ತಾರೆ‘ ಎಂದು ಹೇಳಿದ್ದಾರೆ.

‘ಭಕ್ಷಕರು ನಮ್ಮ ನರೆಹೊರೆಯಲ್ಲಿಯೇ ಇರಬಹುದು ಅಥವಾ ಶಾಲಾ ಶಿಕ್ಷಕರು ಆಗಿರಬಹುದು, ಹಣವಂತರು ಆಗಿರಬಹುದು, ನಮ್ಮ ಚರ್ಚ್‌ಗಳಲ್ಲಿಯೂ ಇರಬಹುದು. ಆದ್ದರಿಂದ ನಿಮ್ಮ ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ ಅವರಿಗೆ ಯಾವುದು ತಪ್ಪು ಮತ್ತು ಯಾವುದು ಸರಿ ಎನ್ನುವುದರ ಬಗ್ಗೆ ತಿಳಿಸಿ‘ ಎಂದು ಹೇಳಿದ್ದಾರೆ.

ಹಲವು ಟ್ವಿಟರ್‌ ಬಳಕೆದಾರರು ಕಾರ್ಡಿ ಬಿ ಅವರ ಮಾತನ್ನು ಬೆಂಬಲಿಸಿದ್ದಾರೆ. ‘ನೀವೊಬ್ಬರಾದರು ಈ ಬಗ್ಗೆ ಮುಕ್ತವಾಗಿ ಮಾತನಾಡಿರವುದು ಸಂತಸ ತಂದಿದೆ‘ ಎಂದು ಹೇಳಿದ್ದಾರೆ. ಬೆಂಬಲಿಸಿದ ಎಲ್ಲರಿಗೂ ಕಾರ್ಡಿ ಬಿ ಧನ್ಯವಾದ ತಿಳಿಸಿದ್ದಾರೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago