BREAKING NEWS

ದಲೈಲಾಮಾ ನಡೆ ಖಂಡಿಸಿ ಟ್ವೀಟ್‌ ಮಾಡಿದ ಅಮೆರಿಕದ ರ್‍ಯಾಪರ್ ಕಾರ್ಡಿ ಬಿ

ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಅವರು ‘ಬಾಲಕನಲ್ಲಿ ನಾಲಿಗೆ ಚೀಪುವಂತೆ‘ ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧರ್ಮಗುರುಗಳ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿರುವ ಅಮೆರಿಕದ ಖ್ಯಾತ ರ್‍ಯಾಪ್‌ ಹಾಡುಗಾರ್ತಿ ಕಾರ್ಡಿ ಬಿ, ‘ನಿಮ್ಮ ಮಕ್ಕಳನ್ನು ಭಕ್ಷಕರಿಂದ ದೂರವಿಡಿ‘ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದಲೈಲಾಮಾ ಬಾಲಕನೊಬ್ಬನ ತುಟಿಗೆ ಚುಂಬಿಸಿದ್ದಾರೆ. ನಂತರ ಬಾಲಕನಿಗೆ ತಮ್ಮ ನಾಲಿಗೆ ಚೀಪುವಂತೆ ಹೇಳಿದ್ದಾರೆ. ಬಾಲಕ ಧರ್ಮಗುರುಗಳು ಹೇಳಿದ ಹಾಗೆ ನಾಲಿಗೆ ಚೀಪಲು ಮುಂದಾಗಿದ್ದನು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಹಲವರು ಧರ್ಮಗುರುಗಳ ನಡೆಯನ್ನು ಖಂಡಿಸಿದ್ದರು. ವಿರೋಧ ವ್ಯಕ್ತವಾಗುತ್ತಲೇ ದಲೈಲಾಮಾ ಬಾಲಕ ಮತ್ತು ಆತನ ಪೋಷಕರಲ್ಲಿ ಕ್ಷಮೆಯಾಚಿಸಿದ್ದರು.

ಈ ವಿಡಿಯೊಗೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ ಕಾರ್ಡಿ ಬಿ, ‘ಪ್ರಪಂಚದ ತುಂಬಾ ವಿನಾಶಕಾರಿ ಭಕ್ಷಕರಿದ್ದು, ಮುಗ್ಧ ಅಮಾಯಕ ಜನರು, ಮಕ್ಕಳನ್ನು ಅವರು ಮೊದಲು ಭೇಟೆಯಾಡುತ್ತಾರೆ‘ ಎಂದು ಹೇಳಿದ್ದಾರೆ.

‘ಭಕ್ಷಕರು ನಮ್ಮ ನರೆಹೊರೆಯಲ್ಲಿಯೇ ಇರಬಹುದು ಅಥವಾ ಶಾಲಾ ಶಿಕ್ಷಕರು ಆಗಿರಬಹುದು, ಹಣವಂತರು ಆಗಿರಬಹುದು, ನಮ್ಮ ಚರ್ಚ್‌ಗಳಲ್ಲಿಯೂ ಇರಬಹುದು. ಆದ್ದರಿಂದ ನಿಮ್ಮ ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ ಅವರಿಗೆ ಯಾವುದು ತಪ್ಪು ಮತ್ತು ಯಾವುದು ಸರಿ ಎನ್ನುವುದರ ಬಗ್ಗೆ ತಿಳಿಸಿ‘ ಎಂದು ಹೇಳಿದ್ದಾರೆ.

ಹಲವು ಟ್ವಿಟರ್‌ ಬಳಕೆದಾರರು ಕಾರ್ಡಿ ಬಿ ಅವರ ಮಾತನ್ನು ಬೆಂಬಲಿಸಿದ್ದಾರೆ. ‘ನೀವೊಬ್ಬರಾದರು ಈ ಬಗ್ಗೆ ಮುಕ್ತವಾಗಿ ಮಾತನಾಡಿರವುದು ಸಂತಸ ತಂದಿದೆ‘ ಎಂದು ಹೇಳಿದ್ದಾರೆ. ಬೆಂಬಲಿಸಿದ ಎಲ್ಲರಿಗೂ ಕಾರ್ಡಿ ಬಿ ಧನ್ಯವಾದ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

5 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

5 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

5 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

8 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

8 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

8 hours ago