ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು ಸ್ವಾಗತಿಸಲು ಯಡಿಯೂರಪ್ಪನವರು ತಮ್ಮ ನಿವಾಸದ ಅಂಗಳದಲ್ಲಿ ಹೂಗುಚ್ಛಗಳನ್ನು ಹಿಡಿದು ಕಾಯುತ್ತಾ ನಿಂತಿದ್ದರು. ಅವರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಹಾಗೂ ಮಕ್ಕಳು ಇದ್ದರು.
ಕಾರಿನಿಂದ ಇಳಿದ ಕೂಡಲೇ ಅಮಿತ್ ಶಾ, ಯಡಿಯೂರಪ್ಪನವರ ಕಡೆಗೆ ನಗುಮೊಗ ಬೀರಿದರಾದರೂ ಕಾರು ಇಳಿಯುತ್ತಲೇ, ಯಡಿಯೂರಪ್ಪನವರಿಗೆ ನಿಮ್ಮ ಕೈಯ್ಯಲ್ಲಿರುವ ಹೂಗುಚ್ಛವನ್ನು ನಿಮ್ಮ ಮಗನ ಕೈಗೆ ನೀಡಿ ಎಂದರು. ಇದನ್ನು ನಿರೀಕ್ಷಸದ ಯಡಿಯೂರಪ್ಪನವರಿಗೆ ಮೊದಲಿಗೆ ಅರ್ಥವಾಗಲೇ ಇಲ್ಲ. ಅದನ್ನು ಗಮನಿಸಿದ ಶಾ, ಮತ್ತೆ ಹೂಗುಚ್ಛವನ್ನು ಅವರಿಗೆ ಕೊಡಿ, ಅವರಿಗೆ ಕೊಡಿ ಅಂತ ಕೈ ತೋರಿಸಿ ಹೇಳಿದರು. ಆಗ ಫಕ್ಕನೆ ಅರ್ಥವಾದಂತಾಗಿ ಯಡಿಯೂರಪ್ಪನವರು ತಮ್ಮ ಕೈಯ್ಯಲ್ಲಿದ್ದ ಗುಲಾಬಿ ಹೂಗುಚ್ಛವನ್ನು ವಿಜಯೇಂದ್ರ ಅವರಿಗೆ ಕೊಟ್ಟರು.
ಆಗ, ವಿಜಯೇಂದ್ರ ಅವರಿಂದ ಹೂಗುಚ್ಛವನ್ನು ಸ್ವೀಕಸಿರಿದ ಶಾ, ವಿಜಯೇಂದ್ರ ಅವರ ಬೆನ್ನು ತಟ್ಟಿದರು. ಅಷ್ಟರಲ್ಲಿ ಯಡಿಯೂರಪ್ಪನವರಿಗೆ ಅವರ ಪುತ್ರಿಯರು ತಮ್ಮಲ್ಲಿದ್ದ ಹೂಗುಚ್ಛವನ್ನು ಹಸ್ತಾಂತರಿಸಿದರು. ಆನಂತರ, ಅದನ್ನು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹಸ್ತಾಂತರಿಸಿದರು.
ರಾಜ್ಯ ರಾಜಕಾರಣದಿಂದ ಯಡಿಯೂರಪ್ಪನವರು ದೂರ ಸರಿದಿದ್ದಾರೆ. ಒಂದು ಕಡೆ, ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು, ಅತ್ತ ವಿಜಯೇಂದ್ರ ಅವರನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನದಿಂದಾಗಿಯೇ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿದ್ದಾರೆ. ಹೈಕಮಾಂಡ್ ಗೂ ಯಡಿಯೂರಪ್ಪನವರ ಆಶಯ ಅರ್ಥವಾಗಿದೆ. ಅದರ ಪರಿಣಾಮವಾಗಿಯೇ, ಅಮಿತ್ ಶಾ ಅವರು ಯಡಿಯೂರಪ್ಪನವರ ಕೈಲಿದ್ದ ವಿಜಯೇಂದ್ರ ಕಡೆಯಿಂದ ಹೂಗುಚ್ಛವನ್ನು ಪಡೆದರು ಎಂದು ವಿಶ್ಲೇಷಿಸಲಾಗುತ್ತಿದೆ.
ಯಡಿಯೂರಪ್ಪನವರಿಗೆ ನಿರಾಸೆಯಾದರೂ ಸಮಾಧಾನ!
ಯಡಿಯೂರಪ್ಪನವರಿಗೆ ತಮ್ಮ ಕಡೆಯಿಂದ ಅಮಿತ್ ಶಾ ಅವರು ಹೂಗುಚ್ಛ ಸ್ವೀಕರಿಸದೇ ಇದ್ದರೂ, ತಮ್ಮ ಮಗನ ಕೈಯ್ಯಿಂದ ಹೂಗುಚ್ಛವನ್ನು ಸ್ವೀಕರಿಸಿದ್ದ ನಿರಾಸೆ ಹಾಗೂ ಸಮಾಧಾನ – ಇವರೆಡನ್ನೂ ಒಟ್ಟೊಟ್ಟಿಗೇ ತಂದಿರಬಹುದು. ಮುಂದೆ ತಮ್ಮ ಮಗನ ಭವಿಷ್ಯ ಗಟ್ಟಿಯಾಗುತ್ತದೆ ಎಂಬುದೂ ಇದರಿಂದ ಅವರಿಗೆ ಖಾತ್ರಿಯಾಗಿರಬಹುದು ಎಂದು ಹೇಳಬಹುದಾಗಿದೆ. ಬಿಜೆಪಿಯಲ್ಲೇ ಇರುವ ಯಡಿಯೂರಪ್ಪನವರ ವಿರೋಧಿಗಳು ವಿಜಯೇಂದ್ರ ಅವರನ್ನು ಯಡಿಯೂರಪ್ಪನವರು ಬೆಳೆಸುತ್ತಿರುವುದನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಇದು ಹೈಕಮಾಂಡ್ ವರೆಗೆ ಹೋದರೆ ಹೇಗೆ ಎಂಬ ಆತಂಕ ಯಡಿಯೂರಪ್ಪನವರಿಗೂ ಇದ್ದಿರಬಹುದು. ಆದರೆ, ಅಮಿತ್ ಅವರು ವಿಜಯೇಂದ್ರ ಅವರಿಂದ ಹೂಗುಚ್ಛ ಪಡೆದಿರುವುದು ಹಾಗೂ ಅವರ ಬೆನ್ನು ತಟ್ಟಿರುವುದು ಒಂದು ರೀತಿಯಲ್ಲಿ ಹೈಕಮಾಂಡ್ ‘ಅಭಯ’ ಸಿಕ್ಕಂತಾಗಿದೆ ಎಂಬ ಸಮಾಧಾನ ಯಡಿಯೂರಪ್ಪನವರಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…