BREAKING NEWS

ಯಡಿಯೂರಪ್ಪ ಕೈಲಿದ್ದ ಹೂಗುಚ್ಛವನ್ನು ವಿಜಯೇಂದ್ರ ಕೈಗೆ ಕೊಡಿಸಿ ಸ್ವೀಕರಿಸಿದ ಅಮಿತ್ ಶಾ! ಏನಿದರ ಅರ್ಥ?

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು ಸ್ವಾಗತಿಸಲು ಯಡಿಯೂರಪ್ಪನವರು ತಮ್ಮ ನಿವಾಸದ ಅಂಗಳದಲ್ಲಿ ಹೂಗುಚ್ಛಗಳನ್ನು ಹಿಡಿದು ಕಾಯುತ್ತಾ ನಿಂತಿದ್ದರು. ಅವರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಹಾಗೂ ಮಕ್ಕಳು ಇದ್ದರು.
ಕಾರಿನಿಂದ ಇಳಿದ ಕೂಡಲೇ ಅಮಿತ್ ಶಾ, ಯಡಿಯೂರಪ್ಪನವರ ಕಡೆಗೆ ನಗುಮೊಗ ಬೀರಿದರಾದರೂ ಕಾರು ಇಳಿಯುತ್ತಲೇ, ಯಡಿಯೂರಪ್ಪನವರಿಗೆ ನಿಮ್ಮ ಕೈಯ್ಯಲ್ಲಿರುವ ಹೂಗುಚ್ಛವನ್ನು ನಿಮ್ಮ ಮಗನ ಕೈಗೆ ನೀಡಿ ಎಂದರು. ಇದನ್ನು ನಿರೀಕ್ಷಸದ ಯಡಿಯೂರಪ್ಪನವರಿಗೆ ಮೊದಲಿಗೆ ಅರ್ಥವಾಗಲೇ ಇಲ್ಲ. ಅದನ್ನು ಗಮನಿಸಿದ ಶಾ, ಮತ್ತೆ ಹೂಗುಚ್ಛವನ್ನು ಅವರಿಗೆ ಕೊಡಿ, ಅವರಿಗೆ ಕೊಡಿ ಅಂತ ಕೈ ತೋರಿಸಿ ಹೇಳಿದರು. ಆಗ ಫಕ್ಕನೆ ಅರ್ಥವಾದಂತಾಗಿ ಯಡಿಯೂರಪ್ಪನವರು ತಮ್ಮ ಕೈಯ್ಯಲ್ಲಿದ್ದ ಗುಲಾಬಿ ಹೂಗುಚ್ಛವನ್ನು ವಿಜಯೇಂದ್ರ ಅವರಿಗೆ ಕೊಟ್ಟರು.
ಆಗ, ವಿಜಯೇಂದ್ರ ಅವರಿಂದ ಹೂಗುಚ್ಛವನ್ನು ಸ್ವೀಕಸಿರಿದ ಶಾ, ವಿಜಯೇಂದ್ರ ಅವರ ಬೆನ್ನು ತಟ್ಟಿದರು. ಅಷ್ಟರಲ್ಲಿ ಯಡಿಯೂರಪ್ಪನವರಿಗೆ ಅವರ ಪುತ್ರಿಯರು ತಮ್ಮಲ್ಲಿದ್ದ ಹೂಗುಚ್ಛವನ್ನು ಹಸ್ತಾಂತರಿಸಿದರು. ಆನಂತರ, ಅದನ್ನು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹಸ್ತಾಂತರಿಸಿದರು.
ರಾಜ್ಯ ರಾಜಕಾರಣದಿಂದ ಯಡಿಯೂರಪ್ಪನವರು ದೂರ ಸರಿದಿದ್ದಾರೆ. ಒಂದು ಕಡೆ, ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು, ಅತ್ತ ವಿಜಯೇಂದ್ರ ಅವರನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನದಿಂದಾಗಿಯೇ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿದ್ದಾರೆ. ಹೈಕಮಾಂಡ್ ಗೂ ಯಡಿಯೂರಪ್ಪನವರ ಆಶಯ ಅರ್ಥವಾಗಿದೆ. ಅದರ ಪರಿಣಾಮವಾಗಿಯೇ, ಅಮಿತ್ ಶಾ ಅವರು ಯಡಿಯೂರಪ್ಪನವರ ಕೈಲಿದ್ದ ವಿಜಯೇಂದ್ರ ಕಡೆಯಿಂದ ಹೂಗುಚ್ಛವನ್ನು ಪಡೆದರು ಎಂದು ವಿಶ್ಲೇಷಿಸಲಾಗುತ್ತಿದೆ.
ಯಡಿಯೂರಪ್ಪನವರಿಗೆ ನಿರಾಸೆಯಾದರೂ ಸಮಾಧಾನ!
ಯಡಿಯೂರಪ್ಪನವರಿಗೆ ತಮ್ಮ ಕಡೆಯಿಂದ ಅಮಿತ್ ಶಾ ಅವರು ಹೂಗುಚ್ಛ ಸ್ವೀಕರಿಸದೇ ಇದ್ದರೂ, ತಮ್ಮ ಮಗನ ಕೈಯ್ಯಿಂದ ಹೂಗುಚ್ಛವನ್ನು ಸ್ವೀಕರಿಸಿದ್ದ ನಿರಾಸೆ ಹಾಗೂ ಸಮಾಧಾನ – ಇವರೆಡನ್ನೂ ಒಟ್ಟೊಟ್ಟಿಗೇ ತಂದಿರಬಹುದು. ಮುಂದೆ ತಮ್ಮ ಮಗನ ಭವಿಷ್ಯ ಗಟ್ಟಿಯಾಗುತ್ತದೆ ಎಂಬುದೂ ಇದರಿಂದ ಅವರಿಗೆ ಖಾತ್ರಿಯಾಗಿರಬಹುದು ಎಂದು ಹೇಳಬಹುದಾಗಿದೆ. ಬಿಜೆಪಿಯಲ್ಲೇ ಇರುವ ಯಡಿಯೂರಪ್ಪನವರ ವಿರೋಧಿಗಳು ವಿಜಯೇಂದ್ರ ಅವರನ್ನು ಯಡಿಯೂರಪ್ಪನವರು ಬೆಳೆಸುತ್ತಿರುವುದನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಇದು ಹೈಕಮಾಂಡ್ ವರೆಗೆ ಹೋದರೆ ಹೇಗೆ ಎಂಬ ಆತಂಕ ಯಡಿಯೂರಪ್ಪನವರಿಗೂ ಇದ್ದಿರಬಹುದು. ಆದರೆ, ಅಮಿತ್ ಅವರು ವಿಜಯೇಂದ್ರ ಅವರಿಂದ ಹೂಗುಚ್ಛ ಪಡೆದಿರುವುದು ಹಾಗೂ ಅವರ ಬೆನ್ನು ತಟ್ಟಿರುವುದು ಒಂದು ರೀತಿಯಲ್ಲಿ ಹೈಕಮಾಂಡ್ ‘ಅಭಯ’ ಸಿಕ್ಕಂತಾಗಿದೆ ಎಂಬ ಸಮಾಧಾನ ಯಡಿಯೂರಪ್ಪನವರಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

lokesh

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago