BREAKING NEWS

ಯಡಿಯೂರಪ್ಪ ಕೈಲಿದ್ದ ಹೂಗುಚ್ಛವನ್ನು ವಿಜಯೇಂದ್ರ ಕೈಗೆ ಕೊಡಿಸಿ ಸ್ವೀಕರಿಸಿದ ಅಮಿತ್ ಶಾ! ಏನಿದರ ಅರ್ಥ?

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು ಸ್ವಾಗತಿಸಲು ಯಡಿಯೂರಪ್ಪನವರು ತಮ್ಮ ನಿವಾಸದ ಅಂಗಳದಲ್ಲಿ ಹೂಗುಚ್ಛಗಳನ್ನು ಹಿಡಿದು ಕಾಯುತ್ತಾ ನಿಂತಿದ್ದರು. ಅವರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಹಾಗೂ ಮಕ್ಕಳು ಇದ್ದರು.
ಕಾರಿನಿಂದ ಇಳಿದ ಕೂಡಲೇ ಅಮಿತ್ ಶಾ, ಯಡಿಯೂರಪ್ಪನವರ ಕಡೆಗೆ ನಗುಮೊಗ ಬೀರಿದರಾದರೂ ಕಾರು ಇಳಿಯುತ್ತಲೇ, ಯಡಿಯೂರಪ್ಪನವರಿಗೆ ನಿಮ್ಮ ಕೈಯ್ಯಲ್ಲಿರುವ ಹೂಗುಚ್ಛವನ್ನು ನಿಮ್ಮ ಮಗನ ಕೈಗೆ ನೀಡಿ ಎಂದರು. ಇದನ್ನು ನಿರೀಕ್ಷಸದ ಯಡಿಯೂರಪ್ಪನವರಿಗೆ ಮೊದಲಿಗೆ ಅರ್ಥವಾಗಲೇ ಇಲ್ಲ. ಅದನ್ನು ಗಮನಿಸಿದ ಶಾ, ಮತ್ತೆ ಹೂಗುಚ್ಛವನ್ನು ಅವರಿಗೆ ಕೊಡಿ, ಅವರಿಗೆ ಕೊಡಿ ಅಂತ ಕೈ ತೋರಿಸಿ ಹೇಳಿದರು. ಆಗ ಫಕ್ಕನೆ ಅರ್ಥವಾದಂತಾಗಿ ಯಡಿಯೂರಪ್ಪನವರು ತಮ್ಮ ಕೈಯ್ಯಲ್ಲಿದ್ದ ಗುಲಾಬಿ ಹೂಗುಚ್ಛವನ್ನು ವಿಜಯೇಂದ್ರ ಅವರಿಗೆ ಕೊಟ್ಟರು.
ಆಗ, ವಿಜಯೇಂದ್ರ ಅವರಿಂದ ಹೂಗುಚ್ಛವನ್ನು ಸ್ವೀಕಸಿರಿದ ಶಾ, ವಿಜಯೇಂದ್ರ ಅವರ ಬೆನ್ನು ತಟ್ಟಿದರು. ಅಷ್ಟರಲ್ಲಿ ಯಡಿಯೂರಪ್ಪನವರಿಗೆ ಅವರ ಪುತ್ರಿಯರು ತಮ್ಮಲ್ಲಿದ್ದ ಹೂಗುಚ್ಛವನ್ನು ಹಸ್ತಾಂತರಿಸಿದರು. ಆನಂತರ, ಅದನ್ನು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹಸ್ತಾಂತರಿಸಿದರು.
ರಾಜ್ಯ ರಾಜಕಾರಣದಿಂದ ಯಡಿಯೂರಪ್ಪನವರು ದೂರ ಸರಿದಿದ್ದಾರೆ. ಒಂದು ಕಡೆ, ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು, ಅತ್ತ ವಿಜಯೇಂದ್ರ ಅವರನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನದಿಂದಾಗಿಯೇ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿದ್ದಾರೆ. ಹೈಕಮಾಂಡ್ ಗೂ ಯಡಿಯೂರಪ್ಪನವರ ಆಶಯ ಅರ್ಥವಾಗಿದೆ. ಅದರ ಪರಿಣಾಮವಾಗಿಯೇ, ಅಮಿತ್ ಶಾ ಅವರು ಯಡಿಯೂರಪ್ಪನವರ ಕೈಲಿದ್ದ ವಿಜಯೇಂದ್ರ ಕಡೆಯಿಂದ ಹೂಗುಚ್ಛವನ್ನು ಪಡೆದರು ಎಂದು ವಿಶ್ಲೇಷಿಸಲಾಗುತ್ತಿದೆ.
ಯಡಿಯೂರಪ್ಪನವರಿಗೆ ನಿರಾಸೆಯಾದರೂ ಸಮಾಧಾನ!
ಯಡಿಯೂರಪ್ಪನವರಿಗೆ ತಮ್ಮ ಕಡೆಯಿಂದ ಅಮಿತ್ ಶಾ ಅವರು ಹೂಗುಚ್ಛ ಸ್ವೀಕರಿಸದೇ ಇದ್ದರೂ, ತಮ್ಮ ಮಗನ ಕೈಯ್ಯಿಂದ ಹೂಗುಚ್ಛವನ್ನು ಸ್ವೀಕರಿಸಿದ್ದ ನಿರಾಸೆ ಹಾಗೂ ಸಮಾಧಾನ – ಇವರೆಡನ್ನೂ ಒಟ್ಟೊಟ್ಟಿಗೇ ತಂದಿರಬಹುದು. ಮುಂದೆ ತಮ್ಮ ಮಗನ ಭವಿಷ್ಯ ಗಟ್ಟಿಯಾಗುತ್ತದೆ ಎಂಬುದೂ ಇದರಿಂದ ಅವರಿಗೆ ಖಾತ್ರಿಯಾಗಿರಬಹುದು ಎಂದು ಹೇಳಬಹುದಾಗಿದೆ. ಬಿಜೆಪಿಯಲ್ಲೇ ಇರುವ ಯಡಿಯೂರಪ್ಪನವರ ವಿರೋಧಿಗಳು ವಿಜಯೇಂದ್ರ ಅವರನ್ನು ಯಡಿಯೂರಪ್ಪನವರು ಬೆಳೆಸುತ್ತಿರುವುದನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಇದು ಹೈಕಮಾಂಡ್ ವರೆಗೆ ಹೋದರೆ ಹೇಗೆ ಎಂಬ ಆತಂಕ ಯಡಿಯೂರಪ್ಪನವರಿಗೂ ಇದ್ದಿರಬಹುದು. ಆದರೆ, ಅಮಿತ್ ಅವರು ವಿಜಯೇಂದ್ರ ಅವರಿಂದ ಹೂಗುಚ್ಛ ಪಡೆದಿರುವುದು ಹಾಗೂ ಅವರ ಬೆನ್ನು ತಟ್ಟಿರುವುದು ಒಂದು ರೀತಿಯಲ್ಲಿ ಹೈಕಮಾಂಡ್ ‘ಅಭಯ’ ಸಿಕ್ಕಂತಾಗಿದೆ ಎಂಬ ಸಮಾಧಾನ ಯಡಿಯೂರಪ್ಪನವರಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago