BREAKING NEWS

ಯಡಿಯೂರಪ್ಪ ಕೈಲಿದ್ದ ಹೂಗುಚ್ಛವನ್ನು ವಿಜಯೇಂದ್ರ ಕೈಗೆ ಕೊಡಿಸಿ ಸ್ವೀಕರಿಸಿದ ಅಮಿತ್ ಶಾ! ಏನಿದರ ಅರ್ಥ?

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು ಸ್ವಾಗತಿಸಲು ಯಡಿಯೂರಪ್ಪನವರು ತಮ್ಮ ನಿವಾಸದ ಅಂಗಳದಲ್ಲಿ ಹೂಗುಚ್ಛಗಳನ್ನು ಹಿಡಿದು ಕಾಯುತ್ತಾ ನಿಂತಿದ್ದರು. ಅವರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಹಾಗೂ ಮಕ್ಕಳು ಇದ್ದರು.
ಕಾರಿನಿಂದ ಇಳಿದ ಕೂಡಲೇ ಅಮಿತ್ ಶಾ, ಯಡಿಯೂರಪ್ಪನವರ ಕಡೆಗೆ ನಗುಮೊಗ ಬೀರಿದರಾದರೂ ಕಾರು ಇಳಿಯುತ್ತಲೇ, ಯಡಿಯೂರಪ್ಪನವರಿಗೆ ನಿಮ್ಮ ಕೈಯ್ಯಲ್ಲಿರುವ ಹೂಗುಚ್ಛವನ್ನು ನಿಮ್ಮ ಮಗನ ಕೈಗೆ ನೀಡಿ ಎಂದರು. ಇದನ್ನು ನಿರೀಕ್ಷಸದ ಯಡಿಯೂರಪ್ಪನವರಿಗೆ ಮೊದಲಿಗೆ ಅರ್ಥವಾಗಲೇ ಇಲ್ಲ. ಅದನ್ನು ಗಮನಿಸಿದ ಶಾ, ಮತ್ತೆ ಹೂಗುಚ್ಛವನ್ನು ಅವರಿಗೆ ಕೊಡಿ, ಅವರಿಗೆ ಕೊಡಿ ಅಂತ ಕೈ ತೋರಿಸಿ ಹೇಳಿದರು. ಆಗ ಫಕ್ಕನೆ ಅರ್ಥವಾದಂತಾಗಿ ಯಡಿಯೂರಪ್ಪನವರು ತಮ್ಮ ಕೈಯ್ಯಲ್ಲಿದ್ದ ಗುಲಾಬಿ ಹೂಗುಚ್ಛವನ್ನು ವಿಜಯೇಂದ್ರ ಅವರಿಗೆ ಕೊಟ್ಟರು.
ಆಗ, ವಿಜಯೇಂದ್ರ ಅವರಿಂದ ಹೂಗುಚ್ಛವನ್ನು ಸ್ವೀಕಸಿರಿದ ಶಾ, ವಿಜಯೇಂದ್ರ ಅವರ ಬೆನ್ನು ತಟ್ಟಿದರು. ಅಷ್ಟರಲ್ಲಿ ಯಡಿಯೂರಪ್ಪನವರಿಗೆ ಅವರ ಪುತ್ರಿಯರು ತಮ್ಮಲ್ಲಿದ್ದ ಹೂಗುಚ್ಛವನ್ನು ಹಸ್ತಾಂತರಿಸಿದರು. ಆನಂತರ, ಅದನ್ನು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹಸ್ತಾಂತರಿಸಿದರು.
ರಾಜ್ಯ ರಾಜಕಾರಣದಿಂದ ಯಡಿಯೂರಪ್ಪನವರು ದೂರ ಸರಿದಿದ್ದಾರೆ. ಒಂದು ಕಡೆ, ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು, ಅತ್ತ ವಿಜಯೇಂದ್ರ ಅವರನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನದಿಂದಾಗಿಯೇ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿದ್ದಾರೆ. ಹೈಕಮಾಂಡ್ ಗೂ ಯಡಿಯೂರಪ್ಪನವರ ಆಶಯ ಅರ್ಥವಾಗಿದೆ. ಅದರ ಪರಿಣಾಮವಾಗಿಯೇ, ಅಮಿತ್ ಶಾ ಅವರು ಯಡಿಯೂರಪ್ಪನವರ ಕೈಲಿದ್ದ ವಿಜಯೇಂದ್ರ ಕಡೆಯಿಂದ ಹೂಗುಚ್ಛವನ್ನು ಪಡೆದರು ಎಂದು ವಿಶ್ಲೇಷಿಸಲಾಗುತ್ತಿದೆ.
ಯಡಿಯೂರಪ್ಪನವರಿಗೆ ನಿರಾಸೆಯಾದರೂ ಸಮಾಧಾನ!
ಯಡಿಯೂರಪ್ಪನವರಿಗೆ ತಮ್ಮ ಕಡೆಯಿಂದ ಅಮಿತ್ ಶಾ ಅವರು ಹೂಗುಚ್ಛ ಸ್ವೀಕರಿಸದೇ ಇದ್ದರೂ, ತಮ್ಮ ಮಗನ ಕೈಯ್ಯಿಂದ ಹೂಗುಚ್ಛವನ್ನು ಸ್ವೀಕರಿಸಿದ್ದ ನಿರಾಸೆ ಹಾಗೂ ಸಮಾಧಾನ – ಇವರೆಡನ್ನೂ ಒಟ್ಟೊಟ್ಟಿಗೇ ತಂದಿರಬಹುದು. ಮುಂದೆ ತಮ್ಮ ಮಗನ ಭವಿಷ್ಯ ಗಟ್ಟಿಯಾಗುತ್ತದೆ ಎಂಬುದೂ ಇದರಿಂದ ಅವರಿಗೆ ಖಾತ್ರಿಯಾಗಿರಬಹುದು ಎಂದು ಹೇಳಬಹುದಾಗಿದೆ. ಬಿಜೆಪಿಯಲ್ಲೇ ಇರುವ ಯಡಿಯೂರಪ್ಪನವರ ವಿರೋಧಿಗಳು ವಿಜಯೇಂದ್ರ ಅವರನ್ನು ಯಡಿಯೂರಪ್ಪನವರು ಬೆಳೆಸುತ್ತಿರುವುದನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಇದು ಹೈಕಮಾಂಡ್ ವರೆಗೆ ಹೋದರೆ ಹೇಗೆ ಎಂಬ ಆತಂಕ ಯಡಿಯೂರಪ್ಪನವರಿಗೂ ಇದ್ದಿರಬಹುದು. ಆದರೆ, ಅಮಿತ್ ಅವರು ವಿಜಯೇಂದ್ರ ಅವರಿಂದ ಹೂಗುಚ್ಛ ಪಡೆದಿರುವುದು ಹಾಗೂ ಅವರ ಬೆನ್ನು ತಟ್ಟಿರುವುದು ಒಂದು ರೀತಿಯಲ್ಲಿ ಹೈಕಮಾಂಡ್ ‘ಅಭಯ’ ಸಿಕ್ಕಂತಾಗಿದೆ ಎಂಬ ಸಮಾಧಾನ ಯಡಿಯೂರಪ್ಪನವರಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

44 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

50 mins ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

55 mins ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

14 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

15 hours ago