BREAKING NEWS

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ

ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ.

ಜಾರ್ಖಂಡ್ ನಲ್ಲಿರುವ ಆತನ ಮನೆ ಹಾಗೂ ಉತ್ತರ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ತಪಾಸಣೆಯ ಬಳಿಕ ಆತನನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ ಎಂದು ಗುರುತಿಸಲಾಗಿದ್ದು, ದೇಶಾದ್ಯಂತ ಐಎಸ್ಐಎಸ್ ಮಾಡ್ಯೂಲ್‌ಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಎಎಂಯು ನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜು.16, 17 ರಂದು ಅನ್ಸಾರಿ ಮನೆಯಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು. ಆ ವೇಳೆ ಅಲ್ಲಿಂದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದೋಷಾರೋಪಣೆಗೆ ಪೂರಕವಾಗುವಂತಹ ವಸ್ತು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂಘಟನೆಯ ಪ್ರಚಾರ ಮಾಡಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಅನ್ಸಾರಿ ತನ್ನ ಸಹಚರರು ಮತ್ತು ಇತರ ಅಪರಿಚಿತ ವ್ಯಕ್ತಿಗಳೊಂದಿಗೆ ಸೇರಿ ISIS ಪರವಾಗಿ ಕ್ರಿಮಿನಲ್ ಸಂಚು ರೂಪಿಸಿದ್ದ ಎಂದು ವಕ್ತಾರರು ಹೇಳಿದ್ದಾರೆ.

ಅನ್ಸಾರಿ ಮತ್ತು ಅವರ ಸಹಚರರು ಇಸ್ಲಾಮಿಕ್ ಸ್ಟೇಟ್ ಎಂದೂ ಕರೆಯಲ್ಪಡುವ ಐಸಿಸ್‌ಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago