BREAKING NEWS

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ

ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ.

ಜಾರ್ಖಂಡ್ ನಲ್ಲಿರುವ ಆತನ ಮನೆ ಹಾಗೂ ಉತ್ತರ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ತಪಾಸಣೆಯ ಬಳಿಕ ಆತನನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ ಎಂದು ಗುರುತಿಸಲಾಗಿದ್ದು, ದೇಶಾದ್ಯಂತ ಐಎಸ್ಐಎಸ್ ಮಾಡ್ಯೂಲ್‌ಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಎಎಂಯು ನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜು.16, 17 ರಂದು ಅನ್ಸಾರಿ ಮನೆಯಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು. ಆ ವೇಳೆ ಅಲ್ಲಿಂದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದೋಷಾರೋಪಣೆಗೆ ಪೂರಕವಾಗುವಂತಹ ವಸ್ತು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂಘಟನೆಯ ಪ್ರಚಾರ ಮಾಡಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಅನ್ಸಾರಿ ತನ್ನ ಸಹಚರರು ಮತ್ತು ಇತರ ಅಪರಿಚಿತ ವ್ಯಕ್ತಿಗಳೊಂದಿಗೆ ಸೇರಿ ISIS ಪರವಾಗಿ ಕ್ರಿಮಿನಲ್ ಸಂಚು ರೂಪಿಸಿದ್ದ ಎಂದು ವಕ್ತಾರರು ಹೇಳಿದ್ದಾರೆ.

ಅನ್ಸಾರಿ ಮತ್ತು ಅವರ ಸಹಚರರು ಇಸ್ಲಾಮಿಕ್ ಸ್ಟೇಟ್ ಎಂದೂ ಕರೆಯಲ್ಪಡುವ ಐಸಿಸ್‌ಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago