BREAKING NEWS

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ

ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ.

ಜಾರ್ಖಂಡ್ ನಲ್ಲಿರುವ ಆತನ ಮನೆ ಹಾಗೂ ಉತ್ತರ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ತಪಾಸಣೆಯ ಬಳಿಕ ಆತನನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ ಎಂದು ಗುರುತಿಸಲಾಗಿದ್ದು, ದೇಶಾದ್ಯಂತ ಐಎಸ್ಐಎಸ್ ಮಾಡ್ಯೂಲ್‌ಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಎಎಂಯು ನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜು.16, 17 ರಂದು ಅನ್ಸಾರಿ ಮನೆಯಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು. ಆ ವೇಳೆ ಅಲ್ಲಿಂದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದೋಷಾರೋಪಣೆಗೆ ಪೂರಕವಾಗುವಂತಹ ವಸ್ತು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂಘಟನೆಯ ಪ್ರಚಾರ ಮಾಡಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಅನ್ಸಾರಿ ತನ್ನ ಸಹಚರರು ಮತ್ತು ಇತರ ಅಪರಿಚಿತ ವ್ಯಕ್ತಿಗಳೊಂದಿಗೆ ಸೇರಿ ISIS ಪರವಾಗಿ ಕ್ರಿಮಿನಲ್ ಸಂಚು ರೂಪಿಸಿದ್ದ ಎಂದು ವಕ್ತಾರರು ಹೇಳಿದ್ದಾರೆ.

ಅನ್ಸಾರಿ ಮತ್ತು ಅವರ ಸಹಚರರು ಇಸ್ಲಾಮಿಕ್ ಸ್ಟೇಟ್ ಎಂದೂ ಕರೆಯಲ್ಪಡುವ ಐಸಿಸ್‌ಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago