ಬೆಂಗಳೂರು: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಜತೆಗೆ, ಪ್ರಕರಣವೊಂದರಲ್ಲಿ ಪತ್ನಿಗೆ ಪತಿ ನೀಡಬೇಕಿದ್ದ ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗಳಿಗೆ ಕಡಿಮೆ ಮಾಡಿದ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.
ವಿವಾಹಕ್ಕೆ ಮುನ್ನ ಉದ್ಯೋಗದಲ್ಲಿದ್ದ ಪತ್ನಿ ಈಗ ಮತ್ತೆ ಕೆಲಸಕ್ಕೆ ಸೇರದಿರಲು ಸಮರ್ಪಕ ಕಾರಣಗಳಿಲ್ಲ. ಆಲಸ್ಯದಿಂದ ಮನೆಯಲ್ಲಿಯೇ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವುದು ಸಮಂಜಸವಲ್ಲ. ತನ್ನ ಜೀವನ ನಿರ್ವಹಣೆಗೆ ಪತ್ನಿ ಪ್ರಯತ್ನಿಸಬೇಕು. ಪೂರಕ ಜೀವನಾಂಶವನ್ನಷ್ಟೇ ಪತಿಯಿಂದ ಪತ್ನಿ ಕೇಳಬಹುದು ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿವಾಹದ ನಂತರ ಪತ್ನಿಗೆ ಒಂದು ಮಗು ಜನಿಸಿತ್ತು. ಆದರೆ ಪತ್ನಿಗೆ ಅತ್ತೆ ಮತ್ತು ಅವಿವಾಹಿತ ನಾದಿನಿಯೊಂದಿಗೆ ವಾಸಿಸುವ ಇಚ್ಚೆ ಇರಲಿಲ್ಲ. ಹೀಗಾಗಿ ತನ್ನ ತಾಯಿಯೊಂದಿಗೆ ಪ್ರತ್ಯೇಕ ವಾಸವಾಗಿದ್ದ ಪತ್ನಿ ಜೀವನಾಂಶಕ್ಕಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.
ಮ್ಯಾಜಿಸ್ಟ್ರೇಟ್ ಕೋರ್ಟ್ ಪತ್ನಿಗೆ ಮಾಸಿಕ 10 ಸಾವಿರ ರೂಪಾಯಿ ಹಾಗೂ 3 ಲಕ್ಷ ಪರಿಹಾರ ನೀಡುವಂತೆ ಪತಿಗೆ ಆದೇಶ ನೀಡಿತ್ತು. ಇದನ್ನು ಪತಿ ಸೆಷನ್ಸ್ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಸೆಷನ್ಸ್ ಕೋರ್ಟ್ ಜೀವನಾಂಶದ ಮೊತ್ತವನ್ನು 10 ಸಾವಿರದಿಂದ 5 ಸಾವಿರಕ್ಕೆ ಇಳಿಸಿತ್ತು. ಪರಿಹಾರದ ಮೊತ್ತವನ್ನು 3 ಲಕ್ಷದಿಂದ 2 ಲಕ್ಷಕ್ಕೆ ಇಳಿಸಿತ್ತು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…