BREAKING NEWS

ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ; ಕರ್ನಾಟಕ ಹೈಕೋರ್ಟ್

ಬೆಂಗಳೂರು: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್  ತೀರ್ಪು ನೀಡಿದೆ.

ಜತೆಗೆ, ಪ್ರಕರಣವೊಂದರಲ್ಲಿ ಪತ್ನಿಗೆ ಪತಿ ನೀಡಬೇಕಿದ್ದ ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗಳಿಗೆ ಕಡಿಮೆ ಮಾಡಿದ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ವಿವಾಹಕ್ಕೆ ಮುನ್ನ ಉದ್ಯೋಗದಲ್ಲಿದ್ದ ಪತ್ನಿ ಈಗ ಮತ್ತೆ ಕೆಲಸಕ್ಕೆ ಸೇರದಿರಲು ಸಮರ್ಪಕ ಕಾರಣಗಳಿಲ್ಲ. ಆಲಸ್ಯದಿಂದ ಮನೆಯಲ್ಲಿಯೇ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವುದು ಸಮಂಜಸವಲ್ಲ. ತನ್ನ ಜೀವನ ನಿರ್ವಹಣೆಗೆ ಪತ್ನಿ ಪ್ರಯತ್ನಿಸಬೇಕು. ಪೂರಕ ಜೀವನಾಂಶವನ್ನಷ್ಟೇ ಪತಿಯಿಂದ ಪತ್ನಿ ಕೇಳಬಹುದು ಎಂದು ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಿವಾಹದ ನಂತರ ಪತ್ನಿಗೆ ಒಂದು ಮಗು ಜನಿಸಿತ್ತು. ಆದರೆ ಪತ್ನಿಗೆ ಅತ್ತೆ ಮತ್ತು ಅವಿವಾಹಿತ ನಾದಿನಿಯೊಂದಿಗೆ ವಾಸಿಸುವ ಇಚ್ಚೆ ಇರಲಿಲ್ಲ. ಹೀಗಾಗಿ ತನ್ನ ತಾಯಿಯೊಂದಿಗೆ ಪ್ರತ್ಯೇಕ ವಾಸವಾಗಿದ್ದ ಪತ್ನಿ ಜೀವನಾಂಶಕ್ಕಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​​ನಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಪತ್ನಿಗೆ ಮಾಸಿಕ 10 ಸಾವಿರ ರೂಪಾಯಿ ಹಾಗೂ 3 ಲಕ್ಷ ಪರಿಹಾರ ನೀಡುವಂತೆ ಪತಿಗೆ ಆದೇಶ ನೀಡಿತ್ತು. ಇದನ್ನು ಪತಿ ಸೆಷನ್ಸ್ ಕೋರ್ಟ್​​​​ನಲ್ಲಿ ಪ್ರಶ್ನಿಸಿದ್ದರು. ಸೆಷನ್ಸ್ ಕೋರ್ಟ್ ಜೀವನಾಂಶದ ಮೊತ್ತವನ್ನು 10 ಸಾವಿರದಿಂದ 5 ಸಾವಿರಕ್ಕೆ ಇಳಿಸಿತ್ತು. ಪರಿಹಾರದ ಮೊತ್ತವನ್ನು 3 ಲಕ್ಷದಿಂದ 2 ಲಕ್ಷಕ್ಕೆ ಇಳಿಸಿತ್ತು.

ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅತ್ತೆ, ಅವಿವಾಹಿತ ನಾದಿನಿಯೊಂದಿಗೆ ವಾಸಿಸಲು ಪತ್ನಿಗೆ ಇಚ್ಚೆಯಿಲ್ಲ. ಹೀಗಾಗಿ ಪತಿಯ ಮನೆ ತೊರೆದಿದ್ದಾಳೆ. ಅಲ್ಲದೇ ಪತಿ ದಿನಸಿ ಅಂಗಡಿ ನಡೆಸಿ ತಾಯಿ ಮತ್ತು ಸಹೋದರಿಯನ್ನು ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಜೀವನಾಂಶದ ಮೊತ್ತ ಇಳಿಸಿದ ಸೆಷನ್ಸ್ ಕೋರ್ಟ್ ಆದೇಶ ಸೂಕ್ತವಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಲಾಗಿದೆ.
andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

3 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

16 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

16 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

16 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

16 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

16 hours ago