ಅಡಿಲೇಡ್: ಟಿ 20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಐದು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಅಡಿಲೆಡ್ ಓವಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಂತೆ ಬಾಂಗ್ಲಾದೇಶಕ್ಕೆ 16 ಓವರ್ಗಳಿಗೆ 151 ರನ್ ಗಳ ಗುರಿಯನ್ನು ನೀಡಲಾಯಿತು. 6 ವಿಕೆಟ್ ನಷ್ಟಕ್ಕೆ 145 ರನ್ ಗಳ ನ್ನಷ್ಟೇ ಗಳಿಸಲು ಬಾಂಗ್ಲಾ ಶಕ್ತವಾಯಿತು.
ಮಳೆಗೂ ಮುನ್ನ ಅಬ್ಬರದ ಬ್ಯಾಟಿಂಗ್ ಮೂಲಕ ಅರ್ಧ ಶತಕ ಬಾರಿಸಿದ್ದ ಲಿಟನ್ ದಾಸ್ ರನ್ ಔಟ್ ಆಗಿದ್ದು ಬಾಂಗ್ಲಾ ಗೆಲುವಿನ ಆಸೆಗೆ ಮುಳ್ಳಾಯಿತು. 8ನೇ ಓವರ್ ನಲ್ಲಿ ರನ್ ಗಾಗಿ ಓಡುತ್ತಿದ್ದ ವೇಳೆ ಕೆ.ಎಲ್. ರಾಹುಲ್ ಎಸೆದ ಚೆಂಡು ನೇರವಾಗಿ ವಿಕೆಟಿಗೆ ಬಿದ್ದಿದ್ದರಿಂದ ಬಾಂಗ್ಲಾದ ಗೆಲುವಿನ ಕನಸು ಕಮರಿತು. ಲಿಟನ್ ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಒಳಗೊಂಡ 60 ರನ್ ಪೇರಿಸಿದರು.
ನೂರುಲ್ ಹಸನ್ ಮತ್ತು ತಸ್ಕಿನ್ ಅಹಮದ್ ಕೊನೆಯ ಎಸೆತದವರೆಗೆ ಬಾಂಗ್ಲಾದ ಗೆಲುವಿನ ಕನಸನ್ನು ಕಾಪಾಡಿಕೊಂಡು ಬಂದರು. ಕೊನೆಯ ಓವರ್ ನಲ್ಲಿ ಬಾಂಗ್ಲಾಕ್ಕೆ 20 ರನ್ ಗಳ ಸವಾಲು ಎದುರಾಗಿತ್ತು. ಆದರೆ 15 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಆರ್ಷದೀಪ್ ಸಿಂಗ್ ಎಸೆತವನ್ನು ಸಿಕ್ಸರ್ ಆಗಿ ಪರಿವರ್ತಿಸುವಲ್ಲಿ ವಿಫಲವಾಗುವುದರೊಂದಿಗೆ ಬಾಂಗ್ಲಾ ವೀರೋಚಿತ ಸೋಲು ಕಂಡಿತು. ಅಂತಿಮವಾ ಗಿ ಭಾರತ 5 ರನ್ ಗಳ ಜಯ ಸಾಧಿಸಿತು.
ಬಾಂಗ್ಲಾ ಪರ ನಜ್ಮುಲ್ ಹೊಸೈನ್ ಶಾಂತೋ 21, ನಾಯಕ ಶಕೀಬ್ ಅಲ್ ಹಸನ್ 13 , ನೂರುಲ್ ಹಸನ್ 25 ಮತ್ತು ತಸ್ಕಿನ್ ಅಹ್ಮದ್ 12 ರನ್ ಗಳಿಸಿದರು. .ಇದಕ್ಕೂ ಮುನ್ನ ಟಾಸ್ ಗೆದ್ದು ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾ ಡಿಕೊಂಡಿತು. ಭಾರತ ತಂಡ ಕೆ.ಎಲ್.ರಾಹುಲ್ ಅವರ 50 , ಕೊಹ್ಲಿ ಅವರ ಅಜೇಯ 64 ರನ್ , ಸೂರ್ಯ ಕುಮಾರ್ ಯಾದವ್ ಅವರ 30 ರನ್ ಗಳ ಕೊಡುಗೆಯಿಂದ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ನಾಯಕ ರೋಹಿತ್ ಶರ್ಮ 2 ರನ್ ಗೆ ಔಟಾಗಿ ನಿರಾಶೆ ಅನುಭವಿಸಿದರು.
ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ಅಕ್ಷರ್ ಪಟೇಲ್ ಒಂದಂಕಿ ದಾಟಲಿಲ್ಲ. ಆದರೆ ಅಶ್ವಿನ್ ಅಜೇಯ 13 ರನ್ ಗಳಿಸಿ ಕೊಹ್ಲಿ ಅವರಿಗೆ ಸಾಥ್ ನೀಡಿದ್ದಲ್ಲದೇ ಮೊತ್ತವನ್ನು 180ರ ಗಡಿ ದಾಟಿಸಲು ನೆರವಾದರು.
ಮಳೆ ಪಂದ್ಯಕ್ಕೆ ಅಡ್ಡಿ ಮಾಡಿದಾಗ ಬಾಂಗ್ಲಾ ತಂಡ ಡಿಎಲ್ ಎಸ್ ನಿಯಮದಂತೆ 17 ರನ್ ಮುನ್ನಡೆ ಹೊಂದಿತ್ತು. ಪಂದ್ಯ ರದ್ದಾಗಿದ್ದರೆ ಭಾರತ ಸೋಲುವ ಸ್ಥಿತಿ ನಿರ್ಮಾಣವಾಗಿತ್ತು. ಭಾರತದ ಪರ ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಶಮಿ 1 ವಿಕೆಟ್ ಪಡೆದರು
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…