BREAKING NEWS

ಬಾಂಗ್ಲಾ ವಿರುದ್ಧ ಭಾರತಕ್ಕೆ ಐದು ರನ್ ಗಳ ರೋಚಕ ಜಯ

ಅಡಿಲೇಡ್: ಟಿ 20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಐದು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಅಡಿಲೆಡ್ ಓವಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಂತೆ ಬಾಂಗ್ಲಾದೇಶಕ್ಕೆ 16 ಓವರ್ಗಳಿಗೆ 151 ರನ್ ಗಳ  ಗುರಿಯನ್ನು ನೀಡಲಾಯಿತು. 6 ವಿಕೆಟ್ ನಷ್ಟಕ್ಕೆ 145 ರನ್‌ ಗಳ ನ್ನಷ್ಟೇ ಗಳಿಸಲು ಬಾಂಗ್ಲಾ ಶಕ್ತವಾಯಿತು.

ಮಳೆಗೂ ಮುನ್ನ ಅಬ್ಬರದ ಬ್ಯಾಟಿಂಗ್ ಮೂಲಕ ಅರ್ಧ ಶತಕ ಬಾರಿಸಿದ್ದ ಲಿಟನ್ ದಾಸ್ ರನ್ ಔಟ್ ಆಗಿದ್ದು ಬಾಂಗ್ಲಾ ಗೆಲುವಿನ ಆಸೆಗೆ ಮುಳ್ಳಾಯಿತು. 8ನೇ ಓವರ್‌ ನಲ್ಲಿ  ರನ್ ಗಾಗಿ ಓಡುತ್ತಿದ್ದ ವೇಳೆ ಕೆ.ಎಲ್. ರಾಹುಲ್ ಎಸೆದ ಚೆಂಡು ನೇರವಾಗಿ ವಿಕೆಟಿಗೆ  ಬಿದ್ದಿದ್ದರಿಂದ ಬಾಂಗ್ಲಾದ ಗೆಲುವಿನ ಕನಸು ಕಮರಿತು. ಲಿಟನ್ ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಒಳಗೊಂಡ 60 ರನ್ ಪೇರಿಸಿದರು.

ನೂರುಲ್ ಹಸನ್ ಮತ್ತು ತಸ್ಕಿನ್ ಅಹಮದ್ ಕೊನೆಯ ಎಸೆತದವರೆಗೆ ಬಾಂಗ್ಲಾದ ಗೆಲುವಿನ ಕನಸನ್ನು ಕಾಪಾಡಿಕೊಂಡು ಬಂದರು. ಕೊನೆಯ ಓವರ್‌ ನಲ್ಲಿ ಬಾಂಗ್ಲಾಕ್ಕೆ 20 ರನ್ ಗಳ ಸವಾಲು ಎದುರಾಗಿತ್ತು. ಆದರೆ 15 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಆರ್ಷದೀಪ್ ಸಿಂಗ್ ಎಸೆತವನ್ನು ಸಿಕ್ಸರ್ ಆಗಿ ಪರಿವರ್ತಿಸುವಲ್ಲಿ ವಿಫಲವಾಗುವುದರೊಂದಿಗೆ ಬಾಂಗ್ಲಾ ವೀರೋಚಿತ ಸೋಲು ಕಂಡಿತು. ಅಂತಿಮವಾ ಗಿ ಭಾರತ 5 ರನ್ ಗಳ ಜಯ ಸಾಧಿಸಿತು.

ಬಾಂಗ್ಲಾ ಪರ ನಜ್ಮುಲ್ ಹೊಸೈನ್ ಶಾಂತೋ 21, ನಾಯಕ ಶಕೀಬ್ ಅಲ್ ಹಸನ್ 13 , ನೂರುಲ್ ಹಸನ್ 25 ಮತ್ತು ತಸ್ಕಿನ್ ಅಹ್ಮದ್ 12 ರನ್ ಗಳಿಸಿದರು. .ಇದಕ್ಕೂ ಮುನ್ನ ಟಾಸ್ ಗೆದ್ದು ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾ ಡಿಕೊಂಡಿತು. ಭಾರತ ತಂಡ ಕೆ.ಎಲ್.ರಾಹುಲ್ ಅವರ 50 , ಕೊಹ್ಲಿ ಅವರ ಅಜೇಯ 64 ರನ್ , ಸೂರ್ಯ ಕುಮಾರ್ ಯಾದವ್ ಅವರ 30 ರನ್‌ ಗಳ ಕೊಡುಗೆಯಿಂದ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ನಾಯಕ ರೋಹಿತ್ ಶರ್ಮ 2 ರನ್ ಗೆ ಔಟಾಗಿ ನಿರಾಶೆ ಅನುಭವಿಸಿದರು.

ಹಾರ್ದಿಕ್‌ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ಅಕ್ಷರ್‌ ಪಟೇಲ್‌ ಒಂದಂಕಿ ದಾಟಲಿಲ್ಲ. ಆದರೆ ಅಶ್ವಿನ್ ಅಜೇಯ 13 ರನ್ ಗಳಿಸಿ ಕೊಹ್ಲಿ ಅವರಿಗೆ ಸಾಥ್‌ ನೀಡಿದ್ದಲ್ಲದೇ  ಮೊತ್ತವನ್ನು 180ರ ಗಡಿ ದಾಟಿಸಲು ನೆರವಾದರು.

ಮಳೆ ಪಂದ್ಯಕ್ಕೆ ಅಡ್ಡಿ ಮಾಡಿದಾಗ ಬಾಂಗ್ಲಾ ತಂಡ ಡಿಎಲ್ ಎಸ್ ನಿಯಮದಂತೆ 17 ರನ್ ಮುನ್ನಡೆ ಹೊಂದಿತ್ತು. ಪಂದ್ಯ ರದ್ದಾಗಿದ್ದರೆ ಭಾರತ ಸೋಲುವ ಸ್ಥಿತಿ ನಿರ್ಮಾಣವಾಗಿತ್ತು. ಭಾರತದ ಪರ ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಶಮಿ 1 ವಿಕೆಟ್ ಪಡೆದರು

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago