BREAKING NEWS

ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

ಶಾಸಕರಲ್ಲದೇ ಇರುವವರು ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

ಒಟ್ಟಿನಲ್ಲಿ ಈ ರೀತಿಯಾಗಿ ಅಪರಿಚಿತ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

ಸದ್ಯ ಈ ಸಂಬಂಧ ಸ್ಪೀಕರ್ ಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

lokesh

Recent Posts

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

3 mins ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

9 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

17 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

23 mins ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

9 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

12 hours ago