BREAKING NEWS

ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

ಶಾಸಕರಲ್ಲದೇ ಇರುವವರು ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

ಒಟ್ಟಿನಲ್ಲಿ ಈ ರೀತಿಯಾಗಿ ಅಪರಿಚಿತ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

ಸದ್ಯ ಈ ಸಂಬಂಧ ಸ್ಪೀಕರ್ ಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

lokesh

Recent Posts

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

2 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

20 mins ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

43 mins ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

1 hour ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

6 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

6 hours ago