BREAKING NEWS

ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

ಶಾಸಕರಲ್ಲದೇ ಇರುವವರು ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

ಒಟ್ಟಿನಲ್ಲಿ ಈ ರೀತಿಯಾಗಿ ಅಪರಿಚಿತ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

ಸದ್ಯ ಈ ಸಂಬಂಧ ಸ್ಪೀಕರ್ ಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

3 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

4 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

4 hours ago