BREAKING NEWS

ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

ಶಾಸಕರಲ್ಲದೇ ಇರುವವರು ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

ಒಟ್ಟಿನಲ್ಲಿ ಈ ರೀತಿಯಾಗಿ ಅಪರಿಚಿತ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

ಸದ್ಯ ಈ ಸಂಬಂಧ ಸ್ಪೀಕರ್ ಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

lokesh

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

55 mins ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

3 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

5 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

7 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

10 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

10 hours ago